Advertisement
ಸುದ್ದಿಗಳು

ಬ್ಯಾಂಕ್ ನೌಕರರಿಗೆ ವಾರಾಂತ್ಯ 2 ದಿನ ರಜಾ ಭಾಗ್ಯ | ದಿನಕ್ಕೆ ಹೆಚ್ಚುವರಿ ಗಂಟೆ ಕೆಲಸ ಪಕ್ಕಾ..!

Share

ಬ್ಯಾಂಕ್ ನವರಿಗೇನು..? ಬೇಕಾದಷ್ಟು ರಜೆ. ಕೈ ತುಂಬ ಸಂಬಳ.. ಅನ್ನೋ ಮಾತು ಸರ್ವೆಸಾಮಾನ್ಯ.. ಬೇರೆ ಕಡೆ ಕೆಲಸ ಮಾಡುವವರಿಗೆ ಯಾವಾಗಲೂ ಬ್ಯಾಂಕ್ ನವರ ರಜೆಯ ಮೇಲೆ ಕಣ್ಣು. ಈಗ ಮತ್ತೆ ಬ್ಯಾಂಕ್ ಉದ್ಯೋಗಿಗಳು ಬಂಪರ್ ಲಾಟರಿ ಹೊಡೆದಿದ್ದಾರೆ.

ಬ್ಯಾಂಕ್ ಉದ್ಯೋಗಿಗಳಿಗೆ ವಾರದಲ್ಲಿ ಭಾನುವಾರದ ರಜೆ ಹಾಗೂ ತಿಂಗಳಲ್ಲಿ ಎರಡು ಶನಿವಾರದ ರಜೆ ಸೌಲಭ್ಯ ಈಗಾಗಲೇ ಇದೆ.  ಈಗ ಹೊಸ ಸೌಲಭ್ಯ ಜಾರಿಯಾದಲ್ಲಿ ಭಾನುವಾರದ ಜೊತೆಗೆ ಶನಿವಾರವೂ ರಜಾ ದಿನವಾಗಿ ಘೋಷಣೆ ಆಗಬಹುದು.

ವಾರದಲ್ಲಿ ಎರಡು ದಿನ ವೀಕಾಫ್ ಸಿಗಬೇಕೆಂಬ ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ ಇದೆ. ಬ್ಯಾಂಕ್ ಒಕ್ಕೂಟದ ಒತ್ತಾಯಕ್ಕೆ ಮಣಿದು ಭಾರತೀಯ ಬ್ಯಾಂಕುಗಳ ಸಂಘ ಐದು ದಿನಗಳ ವರ್ಕ್ ವೀಕ್​ಗೆ ಅನುಮೋದನೆ ಕೊಡಬಹುದು ಎಂದು ವರದಿಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಬ್ಯಾಂಕ್ ನೌಕರರು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬಹುದು. ವಾರದಲ್ಲಿ ಎರಡು ರಜಾ ದಿನಗಳ ಸೌಲಭ್ಯ ಪ್ರಾಪ್ತವಾಗುತ್ತದೆ.

ಹೆಚ್ಚುವರಿ ಕೆಲಸ ಮಾಡಬೇಕಾಗಬಹುದು

ವಾರದಲ್ಲಿ ಐದು ದಿನ ಕೆಲಸ ಮಾಡುವ ನಿಯಮ ಜಾರಿಗೆ ಬಂದಲ್ಲಿ ಬ್ಯಾಂಕ್ ಉದ್ಯೋಗಿಗಳು ಕೆಲಸದ ದಿನಗಳಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಬೇಕಾಗಬಹುದು. ವರದಿಗಳ ಪ್ರಕಾರ, ಕೆಲಸದ ದಿನದಲ್ಲಿ 40 ಅಥವಾ 50 ನಿಮಿಷಗಳಷ್ಟು ಹೆಚ್ಚಿಗೆ ಕಾಲ ನೌಕರರು ಕೆಲಸ ಮಾಡಬೇಕೆನ್ನುವ ನಿಯಮ ರೂಪಿಸಲಾಗುತ್ತಿದೆ.

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಈ ಪ್ರಸ್ತಾವ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಮತ್ತು ಆರ್​ಬಿಐನಿಂದ ಈ ಪ್ರಸ್ತಾವಕ್ಕೆ ಅನುಮೋದನೆ ದೊರೆಯಬೇಕು. ಬಳಿಕ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಬ್ಯಾಂಕ್ ನೌಕರರಿಗೆ ವಾರದಲ್ಲಿ ಭಾನುವಾರ ಮತ್ತು ಶನಿವಾರ ಎರಡು ದಿನಗಳು ರಜಾದಿನವಾಗಿ ಸಿಗುತ್ತವೆ.

ಬ್ಯಾಂಕ್ ಉದ್ಯೋಗಿಗಳಿಗೆ ಸಾಮಾನ್ಯವಾಗಿ ಬಹಳಷ್ಟು ಇತರೆ ರಜೆಗಳೂ ಲಭ್ಯವಾಗುತ್ತವೆ. ಸಾರ್ವತ್ರಿಕ ರಜೆಗಳ ಜೊತೆಗೆ ಪ್ರಾದೇಶಿಕ ರಜೆಗಳೂ ಅವರಿಗೆ ಸಿಗುತ್ತವೆ. ಈ ಮಾರ್ಚ್ ತಿಂಗಳಲ್ಲಿ ವಾರದ ರಜೆಯೂ ಸೇರಿ ಬ್ಯಾಂಕ್ ನೌಕರರಿಗೆ 12 ರಜಾ ದಿನಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

5 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago