Advertisement
Opinion

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

Share

ಸಣ್ಣಪ್ಪನಿಗೆ ಖುಷಿಯಾಗಿತ್ತು ,ಬ್ಯಾಂಕಿನವರು ನಿಮ್ಮ ಸಾಲ ಸಂಪೂರ್ಣ ಮುಗಿಯಿತು ಅಂದಾಗ.ಜೊತೆಗೆ ಕೃತಜ್ಞತಾ ಭಾವವೂ ಬಂತು.ತನ್ನ ಕಷ್ಟದ ಕಾಲದಲ್ಲಿ ಆರ್ಥಿಕ ಸಹಾಯ ಕೊಟ್ಟರು ಅಂತ.ಇದೀಗ ಸಣ್ಣಪ್ಪ ತೆಗೆದ ಸಾಲ ಸಂಪೂರ್ಣ ಮರುಪಾವತಿ ಆಗಿದ್ದರೂ ಆತನ ಜಮೀನಿನಲ್ಲಿ ಅಲಸಂಡೆ ಬೆಳೆ ಮುಗಿದಿರಲಿಲ್ಲ.

ಸಣ್ಣಪ್ಪ ನಿರ್ಧರಿಸಿದ್ದ. ಮುಂದಕ್ಕೆ ತನ್ನೆಲ್ಲಾ ಆದಾಯವನ್ಬೂ ಬ್ಯಾಂಕಿನ ತನ್ನ ಉಳಿತಾಯ ಖಾತೆಗೆ ಜಮಾ ಮಾಡುವುದು ಅಂತ.ತನ್ನ ಖರ್ಚಿಗೆ ಬೇಕಾದಾಗ ಬ್ಯಾಂಕಿನಿಂದಲೇ ಹಣ ಪಡೆದು ವ್ಯವಹರಿಸುವುದು ಅಂತ.

ಸಣ್ಣಪ್ಪನ ಜಮೀನಿನಲ್ಲಿ ಆ ಸಾಲಿನ ಅಲಸಂಡೆ ಬೆಳೆ ಮುಗಿದಾಗ ಆತ ಬ್ಯಾಂಕಿಗೆ ಕಟ್ಡಿದ್ದು ಭರ್ತಿ ಎಪ್ಪತ್ತು ಸಾವಿರ ರೂಪಾಯಿಗಳನ್ನು.ಪುನಹ ಅದೇ ಬ್ಯಾಂಕಿನಿಂದ ಸಣ್ಣಪ್ಪ ಬೆಳೆ ಸಾಲ ತೆಗೆದ.ಇನ್ನೊಂದು ಕೃಷಿ ಮಾಡಿದ.ಹೀಗೆಯೇ ಎರಡ್ಮೂರು ವರ್ಷ ಮುಂದುವರೆಯಿತು.

ಇದೀಗ ಸಣ್ಣಪ್ಪನ ಉಳಿತಾಯ ಖಾತೆಯಲ್ಲಿ ಒಂದಷ್ಟು ಹಣ ಉಳಿತಾಯದ ಲೆಕ್ಕದಲ್ಲೇ ಇದೆ.ಬ್ಯಾಂಕಿನವರು ಸಣ್ಣಪ್ಪನ ಅನುಕೂಲಕ್ಕೆ ಅಂತ ಒಂದು ಡೆಬಿಟ್ ಕಾರ್ಡ್ ಕೊಟ್ಟಿದ್ದಾರೆ.ಅದರ ಜೊತೆಗೆ ಆತ ಮೊಬೈಲ್ ಬಳಸಿ ಹಣ ಪಾವತಿಸುವುದನ್ನೂ ಅಭ್ಯಸಿಸಿದ್ದಾನೆ.ತನ್ನ ಎಲ್ಲ ಆದಾಯವನ್ನೂ ಬ್ಯಾಂಕಿಗೆ ಒಮ್ಮೆ ತುಂಬುವುದು ಮತ್ತೆ ತನ್ನ ಖರ್ಚಿಗೆ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಮೊಬೈಲ್ ಮುಖಾಂತರ ಪಾವತಿಸುವುದು ಆತನಿಗೆ ರೂಢಿಯಾಗಿ ಹೋಗಿದೆ.ತೀರಾ ಸಣ್ಣ ಪ್ರಮಾಣದ ನಗದು ಹಣವಷ್ಟೇ ಆತನ ಬಳಿ ಇದೀಗ ಇರುವುದು.

ಬ್ಯಾಂಕಿನವರಿಗೂ ಸಣ್ಣಪ್ಪನ ಮೇಲೆ ವಿಶ್ವಾಸ ಬಂದಿದೆ.ಇನ್ನೇನಾದರೂ ಕಾರಣಕ್ಕಾಗಿ ಸಾಲ ಬೇಕಿದ್ದರೆ ಕೊಡಬಹುದು ಅಂತ ಸಣ್ಣಪ್ಪನಿಗೆ ಹೇಳಿದ್ದಾರೆ.
‌‌ಇದನ್ನು ರೂಢಿಸಿಕೊಂಡರೆ ಹಲವು ಅನುಕೂಲಗಳು ಇವೆ.ನಮ್ಮ ರೈತರು ಸೋತು ಹೋಗುವುದು ಈ ಅಭ್ಯಾಸ ರೂಢಿಸಿಕೊಳ್ಳದೆಯೇ ಆಗಿದೆ.ಸಾಲ ತೆಗೆಯಲು ಮತ್ತು ಸಾಲ ಕಟ್ಟಲು ಮಾತ್ರ ಬ್ಯಾಂಕಿಗೆ ಹೋಗಬೇಕಾದ್ದಲ್ಲ.ಬ್ಯಾಂಕಿನೊಡನೆ ನಮ್ಮ ವ್ಯವಹಾರ ಅವರುಗಳಿಗೆ ನಮ್ಮ ಆದಾಯ ಎಷ್ಟಿದೆ ಎಂಬ ಪರಿಚಯ ಮಾಡಿಸುವಂತಿರ ಬೇಕು.

(ನನ್ನ ಬಗ್ಗೆ ಹೇಳುವುದಾದರೆ ನನ್ನ ತಾಳೆ ಹಣ್ಣಿನ ಮಾರಾಟದಿಂದ ಬರುವ ಹಣ ಸಂಪೂರ್ಣವಾಗಿ ನನ್ನ ಬ್ಯಾಂಕ್ ಅಕೌಂಟಿಗೆ ಬರುವುದು.ಮುಖ್ಯವಾಗಿ ಬೇಕಾದ್ದು ಏನು ಅಂದರೆ ನಿರಂತರವಾಗಿ,ನಿಯಮಿತವಾಗಿ ನಮ್ಮ ಖಾತೆಗೆ ಸುಮಾರಾಗಿ ನಿರ್ದಿಷ್ಟ ಹಣ ಜಮಾವಣೆಯಾಗುವುದು.ಐದಾರು ವರ್ಷ ಈ ರೀತಿ ಕಳೆದ ಬಳಿಕ ಬ್ಯಾಂಕಿನಿಂದ ನಿರಂತರವಾಗಿ ಫೋನು/ ಸಂದೇಶ ಬರುತ್ತಾ ಇದೆ.ಪ್ರತಿ ತಿಂಗಳೂ ನನ್ನ ಖಾತೆಗೆ ಎಷ್ಟು ಹಣ ಜಮಾವಣೆ ಸಾಮಾನ್ಯವಾಗಿ ಆಗುತ್ತದೆಯೋ ಅದರ ಹತ್ತು ಪಟ್ಟಿನಷ್ಟು ಹಣ ಸಾಲ ಪಡೆದುಕೊಳ್ಳಿ ಅಂತ.)

ನಿರಂತರವಾಗಿ ಪ್ರತಿ ತಿಂಗಳೂ ಹಣ ನಮ್ಮ ಖಾತೆಗೆ ಜಮಾವಣೆ ಆಗುತ್ತಿರ ಬೇಕು.ಅದರಿಂದ ಎಷ್ಟು ಖರ್ಚು ಆಯಿತು,ಎಷ್ಟು ಉಳಿದಿದೆ ಎಂಬ ಪ್ರಶ್ನೆ ಇಲ್ಲ.ಇದು ಬ್ಯಾಂಕಿನಲ್ಲಿನ ನಮ್ಮ credit ratingನ್ನು ಹೆಚ್ಚಿಸುತ್ತದೆ.ಮತ್ತು‌ ಮುಂದಕ್ಕೆ ಬೇಕಿದ್ದಾಗ ಸಾಲ ಸುಲಲಿತವಾಗಿ ಸಿಗುವಲ್ಲಿ ಸಹಕಾರಿಯಾಗಲಿದೆ.

ಬರಹ :
ರಮೇಶ್‌ ದೇಲಂಪಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago