#Banking | ಬ್ಯಾಂಕಿಂಗ್ ಕ್ಷೇತ್ರ ಭಾರತದ ಬಲಿಷ್ಠ ಕ್ಷೇತ್ರವೆಂದು ಪರಿಗಣನೆ | ರೋಜ್‌ಗಾರ್ ಮೇಳದಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳ ವಿತರಿಸಿದ ಮೋದಿ |

July 22, 2023
2:40 PM
ಭಾರತವು ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ #India ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ #Banking ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ #NarendraModi ಹೇಳಿದ್ದಾರೆ.

ರೋಜ್‌ಗಾರ್ ಮೇಳದ #RozgarMela ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು.

ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು.

9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್‌ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್‌ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್‌ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror