#Banking | ಬ್ಯಾಂಕಿಂಗ್ ಕ್ಷೇತ್ರ ಭಾರತದ ಬಲಿಷ್ಠ ಕ್ಷೇತ್ರವೆಂದು ಪರಿಗಣನೆ | ರೋಜ್‌ಗಾರ್ ಮೇಳದಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳ ವಿತರಿಸಿದ ಮೋದಿ |

July 22, 2023
2:40 PM
ಭಾರತವು ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ #India ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ #Banking ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ #NarendraModi ಹೇಳಿದ್ದಾರೆ.

ರೋಜ್‌ಗಾರ್ ಮೇಳದ #RozgarMela ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು.

ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು.

9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್‌ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್‌ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್‌ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror