ಮುಂದಿನ 25 ವರ್ಷಗಳು ಭಾರತಕ್ಕೆ #India ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ #Banking ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ #NarendraModi ಹೇಳಿದ್ದಾರೆ.
ರೋಜ್ಗಾರ್ ಮೇಳದ #RozgarMela ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು.
ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು.
9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…