ಮುಂದಿನ 25 ವರ್ಷಗಳು ಭಾರತಕ್ಕೆ #India ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ #Banking ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ #NarendraModi ಹೇಳಿದ್ದಾರೆ.
ರೋಜ್ಗಾರ್ ಮೇಳದ #RozgarMela ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು.
ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು.
9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…