Advertisement
MIRROR FOCUS

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

Share

ತಾಪಮಾನ ಏರಿಕೆಯಿಂದ ಉಂಟಾಗಿರುವ ಬಿಸಿಯನ್ನು ತಣ್ಣಗಾಗಿಸಲು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮಂಜುಗಡ್ಡೆ ಮಾದರಿಯ ಆಹಾರ ಪದಾರ್ಥಗಳನ್ನು ಪ್ರಾಣಿಗಳಿಗೆ  ನೀಡಲಾಗುತ್ತಿದ್ದು,  ತಂಪಾದ ವಾತಾವರಣ ಕಲ್ಪಿಸಲಾಗಿದೆ. ಇದೊಂದು ವಿನೂತನ ಪ್ರಯತ್ನವಾಗಿದ್ದು ಗಮನ ಸೆಳೆಯುತ್ತಿದೆ.

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ ಪ್ರಾಣಿಗಳಿಗೆ ತಂಪಾದ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ತಂಪಾದ ಆಹಾರ ಪದಾರ್ಥಗಳನ್ನು ನೀಡುತ್ತಿದ್ದಾರೆ. ಮೃಗಾಲಯದಲ್ಲಿರುವ ಕರಡಿ, ಹಿಪ್ಪೊಪೋಟಮಸ್, ಆನೆ, ಜಿರಾಫೆ, ಜೀಬ್ರಾ, ಕೋತಿ ಸೇರಿದಂತೆ ಇತರೆ ಸಸ್ಯಾಹಾರಿ ಪ್ರಾಣಿಗಳಿಗೆ ವಿಶೇಷ ಆಹಾರ ತಿನಿಸುಗಳನ್ನು ನೀಡಲಾಗುತ್ತಿದೆ.  ತಂಪಾದ  ಆಹಾರ ಪದಾರ್ಥಗಳನ್ನು ತಿನ್ನುತ್ತಿರುವ ಪ್ರಾಣಿಗಳ ದೃಶ್ಯ ಸಹಸ್ರಾರು ಪ್ರಾಣಿ ಪ್ರಿಯರಿಗೆ ಮುದ ನೀಡುತ್ತಿದೆ. ಇನ್ನೂ ಕೆಲವು ಪ್ರಾಣಿಗಳು ತಂಗಿರುವ ಸ್ಥಳದಲ್ಲಿ  ತಣ್ಣನೆಯ ನೀರನ್ನು ಸಿಂಪಡಣೆ ಮಾಡುವ ವ್ಯವಸ್ಥೆ ಮಾಡಲಾಗಿದ್ದು, ಆನೆ, ಹುಲಿ, ಚಿರತೆ, ಸಿಂಹ ಸೇರಿದಂತೆ ಇತರೆ ಪ್ರಾಣಿಗಳಿಗೆ ನೀರಿನ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ.

ಪ್ರಾಣಿಗಳು ಬೇಸಿಗೆಯ ತಾಪಮಾನಕ್ಕೆ ಹೈರಾಣರಾಗುತ್ತಿರುವ ಹಿನ್ನೆಲೆಯಲ್ಲಿ  ಮಂಜುಗಡ್ಡೆ ಮಾದರಿಯ ಆಹಾರ ಹಾಗೂ ಸ್ಪ್ರಿಂಕ್ಲರ್ ವ್ಯವಸ್ಥೆ ಮಾಡಲಾಗಿದೆ.  ಈ ಬಾರಿಯೂ ಜಿರಾಫೆ, ಆನೆಯಂತಹ ದೊಡ್ಡ ಪ್ರಾಣಿಗಳ ಮೇಲೆ  ತಣ್ಣನೆಯ ನೀರನ್ನು ಸಿಂಪಡಿಸುವ  ವ್ಯವಸ್ಥೆ ಮಾಡಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಸೇನ್ ಹೇಳುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

4 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

5 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

9 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

10 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago