ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |

October 21, 2024
10:02 AM

 ಯಕ್ಷಗಾನದ  ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

Advertisement
Advertisement
Advertisement
Advertisement

ಬಂಟ್ವಾಳದಲ್ಲಿ 1957 ರಲ್ಲಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಅವರು ಪಡೆದಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ | ಅನಿರೀಕ್ಷಿತ ಮಳೆಗೆ ಜನರು ತತ್ತರ | ಅಧಿಕಾರಿಗಳ ತಂಡದಿಂದ  ನಿರಂತರ ಪರಿಹಾರ ಕಾರ್ಯ | ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ| ಮಳೆ ಹಾನಿಗೆ ಶೀಘ್ರ ಪರಿಹಾರದ ಭರವಸೆ |
October 22, 2024
10:43 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ
October 22, 2024
12:34 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |
October 22, 2024
7:29 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |
October 22, 2024
7:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror