ಯಕ್ಷಗಾನದ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಬಂಟ್ವಾಳದಲ್ಲಿ 1957 ರಲ್ಲಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಅವರು ಪಡೆದಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…