ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನ | ಜೀವ ಮತ್ತು ಸದಾಶಿವರಲ್ಲಿ ಭೇದವಿಲ್ಲ, ಭಾವವಿದೆ’ – ಪರಮಪೂಜ್ಯ ಎಡನೀರು ಶ್ರೀ

April 13, 2023
9:55 PM

“ದೇಹವೇ ದೇವಾಲಯ. ಜೀವ ಮತ್ತು ಸದಾಶಿವರಲ್ಲಿ ಭೇದವಿಲ್ಲ, ಭಾವವಿದೆ ಎಂಬ ಕಲ್ಪನೆಯನ್ನು ಹೊಂದಿ ನಮ್ಮ ಧರ್ಮವಿದೆ. ದೇವರಿಗೂ ಭಕ್ತರಿಗೂ ಅವಿನಾಭಾವ ಸಂಬಂಧ ಎನ್ನುವ ನೆಲೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ದರ್ಶನವನ್ನು ಕೊಡುವ ಶುಭ ಸಂದರ್ಭ. ಪ್ರತಿ ಮನೆ ಮನೆಗಳಲ್ಲೂ ಅಜ್ಞಾತವಾಗಿ ಹಬ್ಬುವ ಉತ್ಸವದ ಭಾವವು ನಮ್ಮೊಳಗೆ ಧಾರ್ಮಿಕ ಅನುಭಾವವನ್ನು ಬೆಳೆಸುತ್ತದೆ” ಎಂದು ಎಡನೀರು ಶ್ರೀ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಗಳವರು ಹೇಳಿದರು.

ಅವರು ಪುತ್ತೂರು ಪರ್ಲಡ್ಕದ ‘ಅಗಸ್ತ್ಯ’ ನಿವಾಸದಲ್ಲಿ ಜರುಗಿದ ದಿ.ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಾ, “ಇಂತಹ ಸಂದರ್ಭಗಳಲ್ಲಿ ಸಾಧಕರನ್ನು ಗೌರವಿಸುವುದು, ಅವರ ಆಶೀರ್ವಾದ ಪಡೆಯುವುದು ಇವೆಲ್ಲಾ ಸನಾತನ ಧರ್ಮದ ಮುಖಗಳು. ಅವುಗಳ ಆಚರಣೆಯಲ್ಲಿದೆ ಬದುಕಿನ ಸುಭಗತೆ.”ಎಂದರು.

ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದು ಆ ಕ್ಷೇತ್ರಕ್ಕೆ ಗೌರವ ತಂದ ಕರಾಯ ಲಕ್ಷ್ಮಣ ಶೆಟ್ಟಿಯವರಿಗೆ ದಿ.ವಿಷ್ಣುಮೂರ್ತಿ ನೂರಿತ್ತಾಯ ನೆನಪಿನ ಗೌರವವನ್ನು ಪ್ರದಾನಿಸಲಾಯಿತು. ಕಲಾಪೋಷಕ, ಆಯುರ್ವೇದ ವ್ಯೆದ್ಯ ಡಾ. ಹರಿಕೃಷ್ಣ ಪಾಣಾಜೆಯವರು ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, “ಹಿರಿಯರ ಸ್ಮರಣೆಗಳಿಂದ ಬಾಂಧವ್ಯ ವೃದ್ಧಿಸುತ್ತದೆ. ಬದುಕಿಗದು ಸ್ಫೂರ್ತಿಯಾಗುತ್ತದೆ. ಅವರ ಸಾಧನೆಗಳು ಕುಟುಂಬಿಕರಿಗೆ ಆದರ್ಶವಾಗುತ್ತದೆ. ಹೃದಯಕ್ಕೆ ಹತ್ತಿರವಾದ ಇಂತಹ ಮನೆ ಕಾರ್ಯಕ್ರಮಗಳು ಹೃದ್ಯ.” ಎಂದರು.

ನಿವೃತ್ತ ಪ್ರಾಂಶುಪಾಲ ದಿವಾಕರ ಗೇರುಕಟ್ಟೆಯರವರು ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯರನ್ನು ಸಂಸ್ಮರಿಸಿ, ಸಂಮಾನಿತ ಕರಾಯ ಲಕ್ಷ್ಣಣ ಶೆಟ್ಟಿಯವರನ್ನು ನುಡಿಹಾರದ ಮೂಲಕ ಅಭಿನಂದಿಸಿದರು. ಶ್ರೀ ರಂಗನಾಥ ರಾವ್ ಬೊಳ್ವಾರು ಸಂಮಾನಿತರ ಗುಣಕಥನ ಫಲಕವನ್ನು ವಾಚಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಮತಿ ಕೃಷ್ಣವೇಣಿ ಪ್ರತ್ಯೂಷ್ ಬಾರ್ಯ ಪ್ರಾರ್ಥಿಸಿದರು. ಶ್ರೀಮತಿ ಸ್ವರ್ಣಲತಾ ಬಾರ್ಯ ವಂದಿಸಿದರು. ಆದಿತ್ಯ ತಂತ್ರಿ, ಪ್ರಜ್ಞಾ ತಂತ್ರಿ, ಪ್ರತ್ಯೂಷ ಬಾರ್ಯ ಅತಿಥಿಗಳನ್ನು ಗೌರವಿಸಿದರು. ಕಲಾವಿದ ನಾ. ಕಾರಂತ ಪೆರಾಜೆ ನಿರ್ವಹಿಸಿದರು.

ಕೊನೆಯಲ್ಲಿ ‘ಸುಭದ್ರಾ ರಾಯಭಾರ ಮತ್ತು ವಿದುರಾತಿಥ್ಯ’ ತಾಳಮದ್ದಳೆ ಜರುಗಿತು. ಶ್ರೀಗಳಾದ ಕುಸುಮಾಧರ, ಆನಂದ ಸವಣೂರು (ಭಾಗವತರು), ಮುರಳಿ ಕಲ್ಲೂರಾಯ, ತಾರಾನಾಥ ಸವಣೂರು, ಅಚ್ಯುತ ಪಾಂಗಣ್ಣಾಯ (ಚೆಂಡೆ, ಮದ್ದಳೆ), ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ದಿವಾಕರ ಗೇರುಕಟ್ಟೆ ಮತ್ತು ಭಾಸ್ಕರ ಶೆಟ್ಟಿ (ಆರ್ಥದಾರಿಗಳು) ಭಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror