Advertisement
ಸುದ್ದಿಗಳು

ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನ | ಜೀವ ಮತ್ತು ಸದಾಶಿವರಲ್ಲಿ ಭೇದವಿಲ್ಲ, ಭಾವವಿದೆ’ – ಪರಮಪೂಜ್ಯ ಎಡನೀರು ಶ್ರೀ

Share

“ದೇಹವೇ ದೇವಾಲಯ. ಜೀವ ಮತ್ತು ಸದಾಶಿವರಲ್ಲಿ ಭೇದವಿಲ್ಲ, ಭಾವವಿದೆ ಎಂಬ ಕಲ್ಪನೆಯನ್ನು ಹೊಂದಿ ನಮ್ಮ ಧರ್ಮವಿದೆ. ದೇವರಿಗೂ ಭಕ್ತರಿಗೂ ಅವಿನಾಭಾವ ಸಂಬಂಧ ಎನ್ನುವ ನೆಲೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ದರ್ಶನವನ್ನು ಕೊಡುವ ಶುಭ ಸಂದರ್ಭ. ಪ್ರತಿ ಮನೆ ಮನೆಗಳಲ್ಲೂ ಅಜ್ಞಾತವಾಗಿ ಹಬ್ಬುವ ಉತ್ಸವದ ಭಾವವು ನಮ್ಮೊಳಗೆ ಧಾರ್ಮಿಕ ಅನುಭಾವವನ್ನು ಬೆಳೆಸುತ್ತದೆ” ಎಂದು ಎಡನೀರು ಶ್ರೀ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಗಳವರು ಹೇಳಿದರು.

ಅವರು ಪುತ್ತೂರು ಪರ್ಲಡ್ಕದ ‘ಅಗಸ್ತ್ಯ’ ನಿವಾಸದಲ್ಲಿ ಜರುಗಿದ ದಿ.ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಾ, “ಇಂತಹ ಸಂದರ್ಭಗಳಲ್ಲಿ ಸಾಧಕರನ್ನು ಗೌರವಿಸುವುದು, ಅವರ ಆಶೀರ್ವಾದ ಪಡೆಯುವುದು ಇವೆಲ್ಲಾ ಸನಾತನ ಧರ್ಮದ ಮುಖಗಳು. ಅವುಗಳ ಆಚರಣೆಯಲ್ಲಿದೆ ಬದುಕಿನ ಸುಭಗತೆ.”ಎಂದರು.

ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದು ಆ ಕ್ಷೇತ್ರಕ್ಕೆ ಗೌರವ ತಂದ ಕರಾಯ ಲಕ್ಷ್ಮಣ ಶೆಟ್ಟಿಯವರಿಗೆ ದಿ.ವಿಷ್ಣುಮೂರ್ತಿ ನೂರಿತ್ತಾಯ ನೆನಪಿನ ಗೌರವವನ್ನು ಪ್ರದಾನಿಸಲಾಯಿತು. ಕಲಾಪೋಷಕ, ಆಯುರ್ವೇದ ವ್ಯೆದ್ಯ ಡಾ. ಹರಿಕೃಷ್ಣ ಪಾಣಾಜೆಯವರು ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, “ಹಿರಿಯರ ಸ್ಮರಣೆಗಳಿಂದ ಬಾಂಧವ್ಯ ವೃದ್ಧಿಸುತ್ತದೆ. ಬದುಕಿಗದು ಸ್ಫೂರ್ತಿಯಾಗುತ್ತದೆ. ಅವರ ಸಾಧನೆಗಳು ಕುಟುಂಬಿಕರಿಗೆ ಆದರ್ಶವಾಗುತ್ತದೆ. ಹೃದಯಕ್ಕೆ ಹತ್ತಿರವಾದ ಇಂತಹ ಮನೆ ಕಾರ್ಯಕ್ರಮಗಳು ಹೃದ್ಯ.” ಎಂದರು.

ನಿವೃತ್ತ ಪ್ರಾಂಶುಪಾಲ ದಿವಾಕರ ಗೇರುಕಟ್ಟೆಯರವರು ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯರನ್ನು ಸಂಸ್ಮರಿಸಿ, ಸಂಮಾನಿತ ಕರಾಯ ಲಕ್ಷ್ಣಣ ಶೆಟ್ಟಿಯವರನ್ನು ನುಡಿಹಾರದ ಮೂಲಕ ಅಭಿನಂದಿಸಿದರು. ಶ್ರೀ ರಂಗನಾಥ ರಾವ್ ಬೊಳ್ವಾರು ಸಂಮಾನಿತರ ಗುಣಕಥನ ಫಲಕವನ್ನು ವಾಚಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಮತಿ ಕೃಷ್ಣವೇಣಿ ಪ್ರತ್ಯೂಷ್ ಬಾರ್ಯ ಪ್ರಾರ್ಥಿಸಿದರು. ಶ್ರೀಮತಿ ಸ್ವರ್ಣಲತಾ ಬಾರ್ಯ ವಂದಿಸಿದರು. ಆದಿತ್ಯ ತಂತ್ರಿ, ಪ್ರಜ್ಞಾ ತಂತ್ರಿ, ಪ್ರತ್ಯೂಷ ಬಾರ್ಯ ಅತಿಥಿಗಳನ್ನು ಗೌರವಿಸಿದರು. ಕಲಾವಿದ ನಾ. ಕಾರಂತ ಪೆರಾಜೆ ನಿರ್ವಹಿಸಿದರು.

ಕೊನೆಯಲ್ಲಿ ‘ಸುಭದ್ರಾ ರಾಯಭಾರ ಮತ್ತು ವಿದುರಾತಿಥ್ಯ’ ತಾಳಮದ್ದಳೆ ಜರುಗಿತು. ಶ್ರೀಗಳಾದ ಕುಸುಮಾಧರ, ಆನಂದ ಸವಣೂರು (ಭಾಗವತರು), ಮುರಳಿ ಕಲ್ಲೂರಾಯ, ತಾರಾನಾಥ ಸವಣೂರು, ಅಚ್ಯುತ ಪಾಂಗಣ್ಣಾಯ (ಚೆಂಡೆ, ಮದ್ದಳೆ), ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ದಿವಾಕರ ಗೇರುಕಟ್ಟೆ ಮತ್ತು ಭಾಸ್ಕರ ಶೆಟ್ಟಿ (ಆರ್ಥದಾರಿಗಳು) ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

7 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

7 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago