Advertisement
ಸುದ್ದಿಗಳು

ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನ | ಜೀವ ಮತ್ತು ಸದಾಶಿವರಲ್ಲಿ ಭೇದವಿಲ್ಲ, ಭಾವವಿದೆ’ – ಪರಮಪೂಜ್ಯ ಎಡನೀರು ಶ್ರೀ

Share

“ದೇಹವೇ ದೇವಾಲಯ. ಜೀವ ಮತ್ತು ಸದಾಶಿವರಲ್ಲಿ ಭೇದವಿಲ್ಲ, ಭಾವವಿದೆ ಎಂಬ ಕಲ್ಪನೆಯನ್ನು ಹೊಂದಿ ನಮ್ಮ ಧರ್ಮವಿದೆ. ದೇವರಿಗೂ ಭಕ್ತರಿಗೂ ಅವಿನಾಭಾವ ಸಂಬಂಧ ಎನ್ನುವ ನೆಲೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ದರ್ಶನವನ್ನು ಕೊಡುವ ಶುಭ ಸಂದರ್ಭ. ಪ್ರತಿ ಮನೆ ಮನೆಗಳಲ್ಲೂ ಅಜ್ಞಾತವಾಗಿ ಹಬ್ಬುವ ಉತ್ಸವದ ಭಾವವು ನಮ್ಮೊಳಗೆ ಧಾರ್ಮಿಕ ಅನುಭಾವವನ್ನು ಬೆಳೆಸುತ್ತದೆ” ಎಂದು ಎಡನೀರು ಶ್ರೀ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಗಳವರು ಹೇಳಿದರು.

ಅವರು ಪುತ್ತೂರು ಪರ್ಲಡ್ಕದ ‘ಅಗಸ್ತ್ಯ’ ನಿವಾಸದಲ್ಲಿ ಜರುಗಿದ ದಿ.ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಾ, “ಇಂತಹ ಸಂದರ್ಭಗಳಲ್ಲಿ ಸಾಧಕರನ್ನು ಗೌರವಿಸುವುದು, ಅವರ ಆಶೀರ್ವಾದ ಪಡೆಯುವುದು ಇವೆಲ್ಲಾ ಸನಾತನ ಧರ್ಮದ ಮುಖಗಳು. ಅವುಗಳ ಆಚರಣೆಯಲ್ಲಿದೆ ಬದುಕಿನ ಸುಭಗತೆ.”ಎಂದರು.

ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದು ಆ ಕ್ಷೇತ್ರಕ್ಕೆ ಗೌರವ ತಂದ ಕರಾಯ ಲಕ್ಷ್ಮಣ ಶೆಟ್ಟಿಯವರಿಗೆ ದಿ.ವಿಷ್ಣುಮೂರ್ತಿ ನೂರಿತ್ತಾಯ ನೆನಪಿನ ಗೌರವವನ್ನು ಪ್ರದಾನಿಸಲಾಯಿತು. ಕಲಾಪೋಷಕ, ಆಯುರ್ವೇದ ವ್ಯೆದ್ಯ ಡಾ. ಹರಿಕೃಷ್ಣ ಪಾಣಾಜೆಯವರು ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, “ಹಿರಿಯರ ಸ್ಮರಣೆಗಳಿಂದ ಬಾಂಧವ್ಯ ವೃದ್ಧಿಸುತ್ತದೆ. ಬದುಕಿಗದು ಸ್ಫೂರ್ತಿಯಾಗುತ್ತದೆ. ಅವರ ಸಾಧನೆಗಳು ಕುಟುಂಬಿಕರಿಗೆ ಆದರ್ಶವಾಗುತ್ತದೆ. ಹೃದಯಕ್ಕೆ ಹತ್ತಿರವಾದ ಇಂತಹ ಮನೆ ಕಾರ್ಯಕ್ರಮಗಳು ಹೃದ್ಯ.” ಎಂದರು.

ನಿವೃತ್ತ ಪ್ರಾಂಶುಪಾಲ ದಿವಾಕರ ಗೇರುಕಟ್ಟೆಯರವರು ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯರನ್ನು ಸಂಸ್ಮರಿಸಿ, ಸಂಮಾನಿತ ಕರಾಯ ಲಕ್ಷ್ಣಣ ಶೆಟ್ಟಿಯವರನ್ನು ನುಡಿಹಾರದ ಮೂಲಕ ಅಭಿನಂದಿಸಿದರು. ಶ್ರೀ ರಂಗನಾಥ ರಾವ್ ಬೊಳ್ವಾರು ಸಂಮಾನಿತರ ಗುಣಕಥನ ಫಲಕವನ್ನು ವಾಚಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಮತಿ ಕೃಷ್ಣವೇಣಿ ಪ್ರತ್ಯೂಷ್ ಬಾರ್ಯ ಪ್ರಾರ್ಥಿಸಿದರು. ಶ್ರೀಮತಿ ಸ್ವರ್ಣಲತಾ ಬಾರ್ಯ ವಂದಿಸಿದರು. ಆದಿತ್ಯ ತಂತ್ರಿ, ಪ್ರಜ್ಞಾ ತಂತ್ರಿ, ಪ್ರತ್ಯೂಷ ಬಾರ್ಯ ಅತಿಥಿಗಳನ್ನು ಗೌರವಿಸಿದರು. ಕಲಾವಿದ ನಾ. ಕಾರಂತ ಪೆರಾಜೆ ನಿರ್ವಹಿಸಿದರು.

ಕೊನೆಯಲ್ಲಿ ‘ಸುಭದ್ರಾ ರಾಯಭಾರ ಮತ್ತು ವಿದುರಾತಿಥ್ಯ’ ತಾಳಮದ್ದಳೆ ಜರುಗಿತು. ಶ್ರೀಗಳಾದ ಕುಸುಮಾಧರ, ಆನಂದ ಸವಣೂರು (ಭಾಗವತರು), ಮುರಳಿ ಕಲ್ಲೂರಾಯ, ತಾರಾನಾಥ ಸವಣೂರು, ಅಚ್ಯುತ ಪಾಂಗಣ್ಣಾಯ (ಚೆಂಡೆ, ಮದ್ದಳೆ), ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ದಿವಾಕರ ಗೇರುಕಟ್ಟೆ ಮತ್ತು ಭಾಸ್ಕರ ಶೆಟ್ಟಿ (ಆರ್ಥದಾರಿಗಳು) ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago