ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ | ಬಿಜೆಪಿ ಸರ್ಕಾರದ ಒಂದು ವರ್ಷ ಸಾಧನಾ ಸಮಾವೇಶ ರದ್ದು |

July 28, 2022
12:57 AM

ಸುಳ್ಯದ  ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಹತ್ಯೆ ಹಿನ್ನೆಲೆ ಇಂದು ದೊಡ್ಡ ಬಳ್ಳಾಪುರದಲ್ಲಿ ನಡೆಯಬೇಕಿದ್ದ ಬಿಜೆಪಿ ಸರ್ಕಾರದ ಒಂದು ವರ್ಷ ಸಾಧನಾ ಸಮಾವೇಶವನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ತಡರಾತ್ರಿ 12:15 ಕ್ಕೆ ತುರ್ತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಗುರುವಾರ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು  ಸಿಎಂ ಬೊಮ್ಮಾಯಿ ಅವರು ಹೇಳಿದರು. ಜನೋತ್ಸವ ಕಾರ್ಯಕ್ರಮ ಜನರಿಗಾಗಿ ಆಯೋಜನೆ ಮಾಡಲಾಗಿದೆ, ಅದು ಸಂಭ್ರಮಕ್ಕಾಗಿ ಅಲ್ಲ. ಭರವಸೆಯ ಕಾರ್ಯಕ್ರಮ ಅದು. ಮುಂದೆ ಜನಪರವಾದ ಕೆಲಸ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕರ್ತನ ಹತ್ಯೆಯ ಸಮಯದಲ್ಲಿ ಕಾರ್ಯಕ್ರಮ ನಡೆಸಲು ಮನಸ್ಸಾಗುತ್ತಿಲ್ಲ ಎಂದರು.

ಬೆಳ್ಳಾರೆಯ ಪ್ರವೀಣ್‌ ಹತ್ಯೆಯ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡಲಾಗುತ್ತದೆ. ಆರೋಪಿಗಳಿಗೆ ಕಠಿನ ಶಿಕ್ಷೆ ವಿಧಿಸಲಾಗುತ್ತದೆ ಎಂದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror