ಸುಳ್ಯದ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಇಂದು ದೊಡ್ಡ ಬಳ್ಳಾಪುರದಲ್ಲಿ ನಡೆಯಬೇಕಿದ್ದ ಬಿಜೆಪಿ ಸರ್ಕಾರದ ಒಂದು ವರ್ಷ ಸಾಧನಾ ಸಮಾವೇಶವನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ತಡರಾತ್ರಿ 12:15 ಕ್ಕೆ ತುರ್ತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಗುರುವಾರ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು. ಜನೋತ್ಸವ ಕಾರ್ಯಕ್ರಮ ಜನರಿಗಾಗಿ ಆಯೋಜನೆ ಮಾಡಲಾಗಿದೆ, ಅದು ಸಂಭ್ರಮಕ್ಕಾಗಿ ಅಲ್ಲ. ಭರವಸೆಯ ಕಾರ್ಯಕ್ರಮ ಅದು. ಮುಂದೆ ಜನಪರವಾದ ಕೆಲಸ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕರ್ತನ ಹತ್ಯೆಯ ಸಮಯದಲ್ಲಿ ಕಾರ್ಯಕ್ರಮ ನಡೆಸಲು ಮನಸ್ಸಾಗುತ್ತಿಲ್ಲ ಎಂದರು.
ಬೆಳ್ಳಾರೆಯ ಪ್ರವೀಣ್ ಹತ್ಯೆಯ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡಲಾಗುತ್ತದೆ. ಆರೋಪಿಗಳಿಗೆ ಕಠಿನ ಶಿಕ್ಷೆ ವಿಧಿಸಲಾಗುತ್ತದೆ ಎಂದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…