ರಾಜ್ಯದ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ | ಸಿಎಂ ಬೊಮ್ಮಾಯಿ

December 19, 2022
8:12 PM

ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ನಾನಾ ಭಾಗದಲ್ಲಿ ಪ್ರವಾಸ ಕೈಗೊಂಡ ವೇಳೆ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror