ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನಾನಾ ಭಾಗದಲ್ಲಿ ಪ್ರವಾಸ ಕೈಗೊಂಡ ವೇಳೆ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…