ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನಾನಾ ಭಾಗದಲ್ಲಿ ಪ್ರವಾಸ ಕೈಗೊಂಡ ವೇಳೆ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…