ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

March 14, 2025
11:03 PM
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಒಣ ಮೆಣಸಿನಕಾಯಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿವೆ. ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ
April 26, 2025
9:21 AM
by: The Rural Mirror ಸುದ್ದಿಜಾಲ
ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ
April 25, 2025
9:30 PM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್
April 25, 2025
9:15 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |
April 25, 2025
2:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror