ರಾಜ್ಯದಲ್ಲಿ ಒಣ ಮೆಣಸಿನಕಾಯಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿವೆ. ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…