ರಾಜ್ಯದಲ್ಲಿ ಒಣ ಮೆಣಸಿನಕಾಯಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿವೆ. ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…