ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ಬಸವಸಾಗರ ಜಲಾಶಯದ 14 ಕ್ರಸ್ಟ್ ಗೇಟ್ಗಳ ಮುಖಾಂತರ 42 ಸಾವಿರದ 820 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕದ ಮುಖಾಂತರ 6 ಸಾವಿರ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಜಲಾಶಯಯ ಉಪವಿಭಾಗದ ಸಹಾಯಕ ಎಂಜಿನಿಯರ್ ವಿಜಯಕುಮಾರ್ ಅರಳಿ ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel