ರಾಜ್ಯದ ದೇವಸ್ಥಾನಗಳಿಗೆ ಇನ್ನು ಮುಂದೆ ಅಗತ್ಯ ಮೂಲಭೂತ ಸೌಲಭ್ಯ | ಮುಜರಾಯಿ ಇಲಾಖೆ |

September 16, 2023
11:45 PM
ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ.

ನಮ್ಮ ರಾಜ್ಯದ ಅದೆಷ್ಟೋ ದೇವಾಲಯಗಳು ಮೂಲಭೂತ ಸೌಲಭ್ಯವಿಲ್ಲದೆ ವಂಚಿತವಾಗಿವೆ. ಕೆಲವು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದ್ರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ. ಆದರೆ ಈಗ ರಾಜ್ಯದ ಪ್ರಮುಖ ದೇವಾಲಯಗಳಿಗೆ ಎರಡು ತಿಂಗಳ ಒಳಗಾಗಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು. ತಸ್ತೀಕ್ ಹಣ ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಸಂಪೂರ್ಣ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.

ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ. ಹಳೆಯ ದೇವಾಲಯಗಳಿಗೆ ಕ್ರಮಬದ್ಧವಾಗಿ ಮತ್ತೆ ಕೊಠಡಿ ನಿರ್ಮಾಣ ಮಾಡಲು ಸೂಚಿಸಿದ್ದಾರೆ.

 ಮುಜರಾಯಿ ಇಲಾಖೆ ಖಡಕ್ ಸೂಚನೆ ಏನು?
ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು, ದೇವಾಲಯದ ಆವರಣದ 100 ಮೀಟರ್ ವರೆಗೂ ತಂಬಾಕು ಅಂಗಡಿ ತೆರೆಯುವಂತಿಲ್ಲ., ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ., ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ,
ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ ಇಡುವುದು ಕಡ್ಡಾಯ., ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ., ಈ ಹಣವನ್ನು ದೇವಾಲಯದ ಅಭಿವೃದ್ಧಿಗೆ ವ್ಯಯ ಮಾಡಲಾಗುವುದು.

( ಅಂತರ್ಜಾಲ ಮಾಹಿತಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror