ನಮ್ಮ ರಾಜ್ಯದ ಅದೆಷ್ಟೋ ದೇವಾಲಯಗಳು ಮೂಲಭೂತ ಸೌಲಭ್ಯವಿಲ್ಲದೆ ವಂಚಿತವಾಗಿವೆ. ಕೆಲವು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದ್ರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ. ಆದರೆ ಈಗ ರಾಜ್ಯದ ಪ್ರಮುಖ ದೇವಾಲಯಗಳಿಗೆ ಎರಡು ತಿಂಗಳ ಒಳಗಾಗಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು. ತಸ್ತೀಕ್ ಹಣ ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಸಂಪೂರ್ಣ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.
ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ. ಹಳೆಯ ದೇವಾಲಯಗಳಿಗೆ ಕ್ರಮಬದ್ಧವಾಗಿ ಮತ್ತೆ ಕೊಠಡಿ ನಿರ್ಮಾಣ ಮಾಡಲು ಸೂಚಿಸಿದ್ದಾರೆ.
ಮುಜರಾಯಿ ಇಲಾಖೆ ಖಡಕ್ ಸೂಚನೆ ಏನು?
ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು, ದೇವಾಲಯದ ಆವರಣದ 100 ಮೀಟರ್ ವರೆಗೂ ತಂಬಾಕು ಅಂಗಡಿ ತೆರೆಯುವಂತಿಲ್ಲ., ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ., ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ,
ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ ಇಡುವುದು ಕಡ್ಡಾಯ., ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ., ಈ ಹಣವನ್ನು ದೇವಾಲಯದ ಅಭಿವೃದ್ಧಿಗೆ ವ್ಯಯ ಮಾಡಲಾಗುವುದು.
( ಅಂತರ್ಜಾಲ ಮಾಹಿತಿ)
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…