ನಮ್ಮ ರಾಜ್ಯದ ಅದೆಷ್ಟೋ ದೇವಾಲಯಗಳು ಮೂಲಭೂತ ಸೌಲಭ್ಯವಿಲ್ಲದೆ ವಂಚಿತವಾಗಿವೆ. ಕೆಲವು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದ್ರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ. ಆದರೆ ಈಗ ರಾಜ್ಯದ ಪ್ರಮುಖ ದೇವಾಲಯಗಳಿಗೆ ಎರಡು ತಿಂಗಳ ಒಳಗಾಗಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು. ತಸ್ತೀಕ್ ಹಣ ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಸಂಪೂರ್ಣ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.
ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ. ಹಳೆಯ ದೇವಾಲಯಗಳಿಗೆ ಕ್ರಮಬದ್ಧವಾಗಿ ಮತ್ತೆ ಕೊಠಡಿ ನಿರ್ಮಾಣ ಮಾಡಲು ಸೂಚಿಸಿದ್ದಾರೆ.
ಮುಜರಾಯಿ ಇಲಾಖೆ ಖಡಕ್ ಸೂಚನೆ ಏನು?
ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು, ದೇವಾಲಯದ ಆವರಣದ 100 ಮೀಟರ್ ವರೆಗೂ ತಂಬಾಕು ಅಂಗಡಿ ತೆರೆಯುವಂತಿಲ್ಲ., ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ., ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ,
ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ ಇಡುವುದು ಕಡ್ಡಾಯ., ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ., ಈ ಹಣವನ್ನು ದೇವಾಲಯದ ಅಭಿವೃದ್ಧಿಗೆ ವ್ಯಯ ಮಾಡಲಾಗುವುದು.
( ಅಂತರ್ಜಾಲ ಮಾಹಿತಿ)
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…