ನಮ್ಮ ರಾಜ್ಯದ ಅದೆಷ್ಟೋ ದೇವಾಲಯಗಳು ಮೂಲಭೂತ ಸೌಲಭ್ಯವಿಲ್ಲದೆ ವಂಚಿತವಾಗಿವೆ. ಕೆಲವು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದ್ರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ. ಆದರೆ ಈಗ ರಾಜ್ಯದ ಪ್ರಮುಖ ದೇವಾಲಯಗಳಿಗೆ ಎರಡು ತಿಂಗಳ ಒಳಗಾಗಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು. ತಸ್ತೀಕ್ ಹಣ ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಸಂಪೂರ್ಣ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.
ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ. ಹಳೆಯ ದೇವಾಲಯಗಳಿಗೆ ಕ್ರಮಬದ್ಧವಾಗಿ ಮತ್ತೆ ಕೊಠಡಿ ನಿರ್ಮಾಣ ಮಾಡಲು ಸೂಚಿಸಿದ್ದಾರೆ.
ಮುಜರಾಯಿ ಇಲಾಖೆ ಖಡಕ್ ಸೂಚನೆ ಏನು?
ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು, ದೇವಾಲಯದ ಆವರಣದ 100 ಮೀಟರ್ ವರೆಗೂ ತಂಬಾಕು ಅಂಗಡಿ ತೆರೆಯುವಂತಿಲ್ಲ., ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ., ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ,
ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ ಇಡುವುದು ಕಡ್ಡಾಯ., ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ., ಈ ಹಣವನ್ನು ದೇವಾಲಯದ ಅಭಿವೃದ್ಧಿಗೆ ವ್ಯಯ ಮಾಡಲಾಗುವುದು.
( ಅಂತರ್ಜಾಲ ಮಾಹಿತಿ)
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…