ನಮ್ಮ ರಾಜ್ಯದ ಅದೆಷ್ಟೋ ದೇವಾಲಯಗಳು ಮೂಲಭೂತ ಸೌಲಭ್ಯವಿಲ್ಲದೆ ವಂಚಿತವಾಗಿವೆ. ಕೆಲವು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದ್ರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ. ಆದರೆ ಈಗ ರಾಜ್ಯದ ಪ್ರಮುಖ ದೇವಾಲಯಗಳಿಗೆ ಎರಡು ತಿಂಗಳ ಒಳಗಾಗಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು. ತಸ್ತೀಕ್ ಹಣ ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಸಂಪೂರ್ಣ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.
ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ. ಹಳೆಯ ದೇವಾಲಯಗಳಿಗೆ ಕ್ರಮಬದ್ಧವಾಗಿ ಮತ್ತೆ ಕೊಠಡಿ ನಿರ್ಮಾಣ ಮಾಡಲು ಸೂಚಿಸಿದ್ದಾರೆ.
ಮುಜರಾಯಿ ಇಲಾಖೆ ಖಡಕ್ ಸೂಚನೆ ಏನು?
ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು, ದೇವಾಲಯದ ಆವರಣದ 100 ಮೀಟರ್ ವರೆಗೂ ತಂಬಾಕು ಅಂಗಡಿ ತೆರೆಯುವಂತಿಲ್ಲ., ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ., ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ,
ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ ಇಡುವುದು ಕಡ್ಡಾಯ., ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ., ಈ ಹಣವನ್ನು ದೇವಾಲಯದ ಅಭಿವೃದ್ಧಿಗೆ ವ್ಯಯ ಮಾಡಲಾಗುವುದು.
( ಅಂತರ್ಜಾಲ ಮಾಹಿತಿ)
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…