Advertisement
MIRROR FOCUS

ಭಾರತದಲ್ಲಿ ನಿರ್ಮಾಣವಾದ ವಿದ್ಯುತ್  ಚಾಲಿತ  ವಾಹನಗಳು 100 ದೇಶಗಳಿಗೆ ರಫ್ತು

Share

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನಾ  ಘಟಕಕ್ಕೆ  ಚಾಲನೆ ನೀಡಿದರು.  ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ  ಪ್ರಧಾನಿ, ಮೇಕ್ ಇನ್ ಇಂಡಿಯಾ ಪಯಣಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗಿದೆ.  ಭಾರತದಲ್ಲಿ ನಿರ್ಮಾಣವಾಗಿರುವ   ವಿದ್ಯುತ್  ಚಾಲಿತ  ವಾಹನಗಳು  100 ದೇಶಗಳಿಗೆ ರಫ್ತಾಗಲಿವೆ. ಜಾಗತಿಕ ಮಾರುಕಟ್ಟೆಗೆ ಭಾರತದ ವಾಹನಗಳು  ಪ್ರವೇಶಿಸಲಿದ್ದು,  ಹಸಿರು ಇಂಧನ  ವಲಯಕ್ಕೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು. ಭಾರತ , ಜಪಾನ್  ನಡುವಿನ  ವ್ಯಾಪಾರ, ಸದೃಢವಾಗಿದ್ದು, ಈ  ಸ್ನೇಹ ಸಂಬಂಧಕ್ಕೆ  ಹೊಸ ಆಯಾಮ ದೊರೆತಿದೆ.  ಭಾರತದ ಬಳಿ ಪ್ರಜಾಪ್ರಭುತ್ವದ ಶಕ್ತಿ , ಭೌಗೋಳಿಕ  ಅನುಕೂಲ, ಕೌಶಲ್ಯಯುತ ಕಾರ್ಮಿಕರ  ಸಂಪನ್ಮೂಲವಿದ್ದು,  ಇದನ್ನು ಸದ್ಬಳಕೆ ಮಾಡಿಕೊಳ್ಳುವುದು  ಆಶಯವಾಗಿದೆ ಎಂದರು.  ಮುಂಬರುವ ದಿನಗಳಲ್ಲಿ ಭಾರತ ಶುದ್ಧ ಇಂಧನ ಹಾಗೂ ಶುದ್ಧ ಸಂಚಾರದ ವಿಶ್ವಾಸಾರ್ಹ ಕೇಂದ್ರವಾಗಲಿದೆ .  ಮೇಕ್ ಇನ್ ಇಂಡಿಯಾ ಅಭಿಯಾನದ ಮೂಲಕ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಕೈಗಾರಿಕಾ ಕಾರಿಡಾರ್ ಹಾಗೂ ಉತ್ಪಾದನಾ ಪಾರ್ಕ್ ಗಳನ್ನು ನಿರ್ಮಿಸಲಾಗುತ್ತಿದೆ. ಹಲವು ವಲಯಗಳಿಗೆ ಉತ್ಪಾದನಾ ಆಧಾರಿತ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರಸಕ್ತ ದಶಕದಲ್ಲಿ ದೇಶದ ಎಲೆಕ್ಟ್ರಾನಿಕ್ಸ್ ವಲಯದ ಉತ್ಪಾದನೆ ಶೇಕಡ 500ರಷ್ಟು ಹೆಚ್ಚಳವಾಗಿದೆ. ಮೊಬೈಲ್ ಫೋನ್ ಗಳ ಉತ್ಪಾದನೆ ಶೇಕಡ 2,700ರಷ್ಟು ಹಾಗೂ ರಕ್ಷಣಾ ವಲಯದ ಉತ್ಪಾದನೆ ಶೇಕಡ 200ಕ್ಕಿಂತ ಏರಿಕೆಯಾಗಿದೆ ಎಂದು ತಿಳಿಸಿದರು. ಉತ್ಪಾದನೆ ಸಂಬಂಧಿಸಿದಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಸುಧಾರಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯಕರ ಸ್ಪರ್ಧೆ ಏರ್ಪಟ್ಟಿದೆ. ಪರಿಣಾಮವಾಗಿ ದೇಶಕ್ಕೆ ಲಾಭವಾಗುತ್ತಿದೆ. ಆಡಳಿತಾತ್ಮಕ ಹಾಗೂ ನೀತಿಗಳಲ್ಲಿ ಸುಧಾರಣೆ ಕೈಗೊಂಡಾಗ ಹೂಡಿಕೆದಾರರ ವಿಶ್ವಾಸ ಹೆಚ್ಚಳವಾಗುತ್ತದೆ. ಭವಿಷ್ಯದ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದು ದೇಶದ ಮುಂದಿನ ಆದ್ಯತೆಯಾಗಿದೆ. ದೇಶದಲ್ಲೇ ಉತ್ಪಾದನೆಯಾಗುವ ವಸ್ತುಗಳನ್ನು ಬಳಕೆ ಮಾಡುವುದು ನಮ್ಮ ಜೀವನದ ಧ್ಯೇಯವಾಗಬೇಕು ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

3 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

4 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

10 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

11 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

13 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

14 hours ago