Advertisement
MIRROR FOCUS

ಭಾರತದಲ್ಲಿ ನಿರ್ಮಾಣವಾದ ವಿದ್ಯುತ್  ಚಾಲಿತ  ವಾಹನಗಳು 100 ದೇಶಗಳಿಗೆ ರಫ್ತು

Share

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನಾ  ಘಟಕಕ್ಕೆ  ಚಾಲನೆ ನೀಡಿದರು.  ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ  ಪ್ರಧಾನಿ, ಮೇಕ್ ಇನ್ ಇಂಡಿಯಾ ಪಯಣಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗಿದೆ.  ಭಾರತದಲ್ಲಿ ನಿರ್ಮಾಣವಾಗಿರುವ   ವಿದ್ಯುತ್  ಚಾಲಿತ  ವಾಹನಗಳು  100 ದೇಶಗಳಿಗೆ ರಫ್ತಾಗಲಿವೆ. ಜಾಗತಿಕ ಮಾರುಕಟ್ಟೆಗೆ ಭಾರತದ ವಾಹನಗಳು  ಪ್ರವೇಶಿಸಲಿದ್ದು,  ಹಸಿರು ಇಂಧನ  ವಲಯಕ್ಕೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು. ಭಾರತ , ಜಪಾನ್  ನಡುವಿನ  ವ್ಯಾಪಾರ, ಸದೃಢವಾಗಿದ್ದು, ಈ  ಸ್ನೇಹ ಸಂಬಂಧಕ್ಕೆ  ಹೊಸ ಆಯಾಮ ದೊರೆತಿದೆ.  ಭಾರತದ ಬಳಿ ಪ್ರಜಾಪ್ರಭುತ್ವದ ಶಕ್ತಿ , ಭೌಗೋಳಿಕ  ಅನುಕೂಲ, ಕೌಶಲ್ಯಯುತ ಕಾರ್ಮಿಕರ  ಸಂಪನ್ಮೂಲವಿದ್ದು,  ಇದನ್ನು ಸದ್ಬಳಕೆ ಮಾಡಿಕೊಳ್ಳುವುದು  ಆಶಯವಾಗಿದೆ ಎಂದರು.  ಮುಂಬರುವ ದಿನಗಳಲ್ಲಿ ಭಾರತ ಶುದ್ಧ ಇಂಧನ ಹಾಗೂ ಶುದ್ಧ ಸಂಚಾರದ ವಿಶ್ವಾಸಾರ್ಹ ಕೇಂದ್ರವಾಗಲಿದೆ .  ಮೇಕ್ ಇನ್ ಇಂಡಿಯಾ ಅಭಿಯಾನದ ಮೂಲಕ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಕೈಗಾರಿಕಾ ಕಾರಿಡಾರ್ ಹಾಗೂ ಉತ್ಪಾದನಾ ಪಾರ್ಕ್ ಗಳನ್ನು ನಿರ್ಮಿಸಲಾಗುತ್ತಿದೆ. ಹಲವು ವಲಯಗಳಿಗೆ ಉತ್ಪಾದನಾ ಆಧಾರಿತ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರಸಕ್ತ ದಶಕದಲ್ಲಿ ದೇಶದ ಎಲೆಕ್ಟ್ರಾನಿಕ್ಸ್ ವಲಯದ ಉತ್ಪಾದನೆ ಶೇಕಡ 500ರಷ್ಟು ಹೆಚ್ಚಳವಾಗಿದೆ. ಮೊಬೈಲ್ ಫೋನ್ ಗಳ ಉತ್ಪಾದನೆ ಶೇಕಡ 2,700ರಷ್ಟು ಹಾಗೂ ರಕ್ಷಣಾ ವಲಯದ ಉತ್ಪಾದನೆ ಶೇಕಡ 200ಕ್ಕಿಂತ ಏರಿಕೆಯಾಗಿದೆ ಎಂದು ತಿಳಿಸಿದರು. ಉತ್ಪಾದನೆ ಸಂಬಂಧಿಸಿದಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಸುಧಾರಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯಕರ ಸ್ಪರ್ಧೆ ಏರ್ಪಟ್ಟಿದೆ. ಪರಿಣಾಮವಾಗಿ ದೇಶಕ್ಕೆ ಲಾಭವಾಗುತ್ತಿದೆ. ಆಡಳಿತಾತ್ಮಕ ಹಾಗೂ ನೀತಿಗಳಲ್ಲಿ ಸುಧಾರಣೆ ಕೈಗೊಂಡಾಗ ಹೂಡಿಕೆದಾರರ ವಿಶ್ವಾಸ ಹೆಚ್ಚಳವಾಗುತ್ತದೆ. ಭವಿಷ್ಯದ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದು ದೇಶದ ಮುಂದಿನ ಆದ್ಯತೆಯಾಗಿದೆ. ದೇಶದಲ್ಲೇ ಉತ್ಪಾದನೆಯಾಗುವ ವಸ್ತುಗಳನ್ನು ಬಳಕೆ ಮಾಡುವುದು ನಮ್ಮ ಜೀವನದ ಧ್ಯೇಯವಾಗಬೇಕು ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

9 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

14 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago