Advertisement
ಸುದ್ದಿಗಳು

ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ ಸಿದ್ಧತೆ..!

Share

ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತೆ ಚಾಲನೆ ಸಿಗಲಿದೆ. ಗುಣಮಟ್ಟದ ಆಹಾರ ನೀಡುವಂತೆ ಮಾಡುವುದಕ್ಕೆ ಬಿಬಿಎಂಪಿ ಸಕಲ ಸಿದ್ಧತೆ ಆರಂಭಿಸಿದೆ.

ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನ ಹಾಗೂ ಇನ್ನಷ್ಟುಪರಿಣಾಮಕಾರಿಯಾಗಿ ಮಾರ್ಪಾಡು ಮಾಡುವುದಾಗಿ ಈಗಾಗಲೇ ಘೋಷಿಸಿದೆ. ಅದರಂತೆ ಮೊದಲ ಸಂಪುಟ ಸಭೆಯಲ್ಲಿಯೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮತ್ತೆ ಗುಣಮಟ್ಟದ ಆಹಾರ:

ಸದ್ಯ ನಗರದ ಇಂದಿರಾ ಕ್ಯಾಂಟೀನ್‌ಗಳ ಪೈಕಿ ಅದಮ್ಯ ಚೇತನ 40, ಶೆಫ್‌ಟಾಕ್‌ 92 ಮತ್ತು ರಿವಾರ್ಡ್ಸ್ ಸಂಸ್ಥೆಯು 40 ಕ್ಯಾಂಟೀನ್‌ಗಳನ್ನಷ್ಟೇ ನಿರ್ವಹಿಸುತ್ತಿವೆ. ಗುಣಮಟ್ಟದ ಹಾಗೂ ರುಚಿಕರ ಆಹಾರ ದೊರಕದ ಕಾರಣ ಬಹುತೇಕರು ಇಂದಿರಾ ಕ್ಯಾಂಟೀನ್‌ಗಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ, ಕ್ಯಾಂಟೀನ್‌ಗಳಲ್ಲಿ ಮತ್ತೆ ಗುಣಮಟ್ಟದ ತಿಂಡಿ, ಊಟ ನೀಡುವ ಮೂಲಕ ಜನರನ್ನು ಇಂದಿರಾ ಕ್ಯಾಂಟೀನ್‌ ಗಳ ಕಡೆ ಬರುವಂತೆ ಮಾಡುವುದಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಬೇಡಿಕೆ ಇರುವೆಡೆ ಹೆಚ್ಚಿನ ಆಹಾರ:

ಹೆಚ್ಚಿನ ಜನ ಬರುವ ಕಡೆ ಇಂದಿರಾ ಕ್ಯಾಂಟೀನ್‌ ಸಂಖ್ಯೆ ಹಾಗೂ ಆಹಾರ ಪೂರೈಕೆ ಪ್ರಮಾಣ ಹೆಚ್ಚಿಸಿ, ಕಡಿಮೆ ಇರುವ ಕಡೆ ಆಹಾರ ಸರಬರಾಜು ಪ್ರಮಾಣ ಕಡಿತ ಗೊಳಿಸುವ ಕುರಿತು ಬಿಬಿಎಂಪಿ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ.

ವಲಯ ಮಟ್ಟದಲ್ಲಿ ಟೆಂಡರ್‌:

ಇಂದಿರಾ ಕ್ಯಾಂಟೀನ್‌ಗಳಿಗೆ ಸದ್ಯ ಅದಮ್ಯ ಚೇತನ, ಶೆಫ್‌ಟಾಕ್‌ ಮತ್ತು ರಿವಾರ್ಡ್ಸ್ ಸಂಸ್ಥೆಗಳು ಆಹಾರ ಪೂರೈಕೆ ಮಾಡುವ ಗುತ್ತಿಗೆ ಪಡೆದಿವೆ. ಆಗಸ್ಟ್‌ ವೇಳೆಗೆ ಟೆಂಡರ್‌ ಅವಧಿ ಪೂರ್ಣಗೊಳ್ಳುತ್ತಿದೆ. ಈವರೆಗೆ ಕೇಂದ್ರೀಕೃತವಾಗಿ ಆಹ್ವಾನಿಸುತ್ತಿದ್ದ ಟೆಂಡರ್‌ ಅನ್ನು ಆಗಸ್ಟ್‌ ನಿಂದ ವಲಯ ಮಟ್ಟದಲ್ಲಿ ಆಹ್ವಾನಿಸುವುದಕ್ಕೆ ತೀರ್ಮಾನಿಸಲಾಗಿದೆ.

ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸಹಯೋಗದಲ್ಲಿ ಇಂದಿರಾ ಕ್ಯಾಂಟೀನ್‌ ನಡೆಸುವುದಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅನುದಾನ ನೀಡಲಾಯಿತು. ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ಅನುದಾನ ನೀಡಲಿಲ್ಲ. ಪ್ರತಿ ವರ್ಷ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ. ಆದರೆ, ಸರ್ಕಾರ ಮಾತ್ರ ಅನುದಾನ ನೀಡುತ್ತಿರಲಿಲ್ಲ. ಇದರಿಂದ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡಿದ ಗುತ್ತಿಗೆ ದಾರರಿಗೆ ಬಿಲ್‌ ಪಾವತಿಗೆ ಅಡಚಣೆ ಉಂಟಾಗಿ ಇಂದಿರಾ ಕ್ಯಾಂಟೀನ್‌ಗಳು ನಿರ್ಲಕ್ಷ್ಯಕ್ಕೆ ಒಳಗಾಗಿದ್ದವು. ಇದೀಗ ಮತ್ತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸುವುದಕ್ಕೆ ಬಿಬಿಎಂಪಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಮಾತ್ರ ನಗರದಲ್ಲಿ ಸ್ಥಗಿತಗೊಳಿಸಲಾಗಿದೆ. ಕೆಲವು ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಜನರು ಬರುತ್ತಿಲ್ಲ. ಉಳಿದಂತೆ ಇಂದಿಗೂ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡದೇ, ನೀರು ಸೇರಿದಂತೆ ಮೂಲಸೌಕರ್ಯ ಒದಗಿಸದೇ ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರವನ್ನು ಈ ಹಿಂದಿನ ಬಿಜೆಪಿ ಸರ್ಕಾರ ಮಾಡಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ ಬಂದಿದೆ, ಮತ್ತೆ ಗತಕ್ಕೆ ಮರಳಲಿದೆ ಅಂತ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಅಬ್ದುಲ್‌ ವಾಜೀದ್‌ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

19 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago