Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಬರುತ್ತಿದೆ ಇನ್ನೊಂದು ನೆಟ್ವರ್ಕ್‌ | ಸುಳ್ಯದ ಗ್ರಾಮೀಣ ಭಾಗದಲ್ಲಿ BBNL ಸದ್ದು ಮಾಡುತ್ತಿದೆ…! |

Share

ಗ್ರಾಮೀಣ ಭಾಗಗಳಲ್ಲಿ ಸದಾ ಕಾಣುವುದು ನೆಟ್ವರ್ಕ್‌ ಸಮಸ್ಯೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ನೆಟ್ವರ್ಕ್‌ ಸಮಸ್ಯೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಹಲವು ನೆಟ್ವರ್ಕ್‌ ಗಳು ಹಳ್ಳಿ ತಲುಪಿದ್ದರೂ, ವೇಗದ ಇಂಟರ್ನೆಟ್‌ ಲಭ್ಯವಾದರೂ ಇದೀಗ ಇನ್ನೊಂದು ನೆಟ್ವರ್ಕ್‌ ಹಳ್ಳಿಯ ಕಡೆಗೆ ಮುಖ ಮಾಡಿದೆ. BBNL  ಈಗ ಹಳ್ಳಿಯ ಕಡೆಗೆ ಬರುತ್ತಿದೆ. ಸುಳ್ಯ ತಾಲೂಕಿನ ದೊಡ್ಡತೋಟ, ದುಗ್ಗಲಡ್ಕ ಪ್ರದೇಶದಲ್ಲಿ ಸೇವೆ ಆರಂಭಿಸಿದ್ದು ಮರ್ಕಂಜ ಪ್ರದೇಶಕ್ಕೂ ವಿಸ್ತರಣೆ ಮಾಡಲಿದೆ.

ಕರ್ನಾಟಕದ ಅತೀ ದೊಡ್ಡ ಖಾಸಗಿ ನೆಟ್ವರ್ಕ್‌ ಆಗಿರುವ BBNL ಇಂಟರ್ನೆಟ್‌ ಸೇವೆಯನ್ನು ಒದಗಿಸುತ್ತಿದೆ. FTTH  ಮೂಲಕ ಅತೀ ವೇಗದ ಇಂಟರ್ನೆಟ್‌ ಸೇವೆಯನ್ನು ನೀಡುತ್ತಾ ಬಂದಿದೆ. ಇದೀಗ ಸುಳ್ಯದಲ್ಲಿ ಗ್ರಾಮೀಣ ಭಾಗಗಳಿಗೂ ಸೇವೆಯನ್ನು ನೀಡಲು ಮುಂದಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೂಡಾ ಇಂಟರ್ನೆಟ್‌ ಇಂದು ಅತೀ ಅಗತ್ಯವಾಗಿ ಬೇಕಾಗಿದೆ. ಅದರ ಜೊತೆಗೆ ಗುಣಮಟ್ಟದ ಸೇವೆ ಹಾಗೂ ನೆಟ್ವರ್ಕ್‌ ಬಗ್ಗೆಯೂ ಗ್ರಾಮೀಣ ಜನರು ಉತ್ಸುಕರಾಗಿದ್ದರು.  ಉತ್ತಮವಾದ ಪ್ಲಾನ್‌ ಗಳನ್ನು ಹೊಂದಿರುವ ಈ ನೆಟ್ವರ್ಕ್‌ 10 Mbps ನಿಂದ 150 Mbps ವರೆಗಿನ ವೇಗವನ್ನೂ ಹೊಂದಿದೆ.

ಟಿವಿ ಚಾನೆಲ್‌ ಹಾಗೂ Disney + , Amazon Prime, Zee5, Voot ನಂತಹ ಸ್ಟ್ರೀಮಿಂಗ್‌ ಸೇವೆ ಹಾಗೂ ಸ್ಥಿರ ದೂರವಾಣಿಯೂ ಇದೆ. ವಿದ್ಯುತ್‌ ಕಡಿತವಾದಾಗ ನೆಟ್ವರ್ಕ್‌ ಕಡಿತ ಹಾಗೂ ವೇಗದ ಅಸ್ಥಿರತೆ ಇತ್ಯಾದಿ ಸಮಸ್ಯೆಗಳು BBNL ನಲ್ಲಿ ಕಂಡುಬರುವುದಿಲ್ಲ ಎಂದು ಗ್ರಾಹಕರು ಅಭಿಪ್ರಾಯ ಪಡುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 6363772505 ಅಥವಾ 7022038691  ಸಂಪರ್ಕ ಮಾಡಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago