ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…