Advertisement
MIRROR FOCUS

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸನ್ನದ್ಧರಾಗಿರಿ | ಅಧಿಕಾರಿಗಳಿಗೆ ದ ಕ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Share

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್. ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್. ಮತ್ತು ಎಸ್‍ಇಝಡ್ ನಂತಹ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದರು.ದಕ್ಷಿಣ ಕನ್ನಡ ಜಿಲ್ಲಾಡಳಿತ ಬರಪರಿಹಾರ ನಿಧಿಯಲ್ಲಿ 3 ಕೋಟಿ ರೂಪಾಯಿ ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಮತ್ತಿತರರು ಇದ್ದರು.

Health and District In-charge Minister Dinesh Gundurao has instructed to the officials, to make necessary arrangements and be ready, people do not face any drinking water problem in summer.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

9 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

10 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

10 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

10 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

10 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago