Advertisement
MIRROR FOCUS

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸನ್ನದ್ಧರಾಗಿರಿ | ಅಧಿಕಾರಿಗಳಿಗೆ ದ ಕ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Share

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

Advertisement

ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್. ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್. ಮತ್ತು ಎಸ್‍ಇಝಡ್ ನಂತಹ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದರು.ದಕ್ಷಿಣ ಕನ್ನಡ ಜಿಲ್ಲಾಡಳಿತ ಬರಪರಿಹಾರ ನಿಧಿಯಲ್ಲಿ 3 ಕೋಟಿ ರೂಪಾಯಿ ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಮತ್ತಿತರರು ಇದ್ದರು.

Advertisement

Health and District In-charge Minister Dinesh Gundurao has instructed to the officials, to make necessary arrangements and be ready, people do not face any drinking water problem in summer.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

12 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago