Advertisement
ಸುದ್ದಿಗಳು

ಮದುರಂಗಿಯಲ್ಲಿ ಬದುಕಿನ ರಂಗು | ಅನೇಕ ರೋಗಗಳಿಗೆ ಮನೆ ಮದ್ದು ಈ ಗೋರಂಟಿ

Share

ಹೆನ್ನಾ ( Henna ) ಎಂಬ ಹೆಸರು ಹೆಚ್ಚು ಪ್ರಚಲಿತ. ಮಾನವ ಕುಲದ ಮೊದಲ ಸೌಂದರ್ಯ ವರ್ಧಕ. ಉತ್ತರ ಆಫ್ರಿಕಾ ಮೂಲದ ಈ ಸಸ್ಯ ಸುಮಾರು 5,000 ವರ್ಷಗಳ ಕೆಳಗೆ ಪರ್ಶಿಯ ದೇಶದಲ್ಲಿ ಅತ್ಯಂತ ಪ್ರಚಲಿತವಿದ್ದ ಅಂದಿನ ಹೆಣ್ಣು ಮಕ್ಕಳ ಸೌಂದರ್ಯ ಸಾಧನ. ನಂತರ ಮೊಘಲ್ ಸಾಮ್ರಾಜ್ಯದ ಕಾಲದಲ್ಲಿ ಭಾರತದಲ್ಲಿ ಹೆಚ್ಚು ಪ್ರಸಿದ್ಧಿಗೆ ಬಂದಿದ್ದು. ಮದರಂಗಿ (ಗೋರಂಟಿ) ಇದನ್ನು ಹೆಚ್ಚಾಗಿ ಚರ್ಮಕ್ಕೆ, ಕೂದಲಿಗೆ ಬಣ್ಣ ಬರಿಸಲು ಉಪಯೋಗಿಸುತ್ತಾರೆ. ಇದರ ಬೇರು ಕಾಂಡ ಎಲೆ ಹೂ ಕಾಯಿ ಎಲ್ಲವನ್ನೂ ಔಷಧೀಯ ರೂಪದಲ್ಲಿ ಉಪಯೋಗಿಸುತ್ತಾರೆ.

1) ಇದರ ಎಲೆಯನ್ನು ಮತ್ತು ನೀಲಿ ಸೊಪ್ಪು ಸೇರಿಸಿ ಅರೆದು ತಲೆಗೆ ಪ್ಯಾಕ್ ಹಾಕುವುದರಿಂದ ಕೂದಲು ಕಪ್ಪು ಮಿಶ್ರಿತ ಕೆಂಪು ಬಣ್ಣ ಬರುತ್ತದೆ. ಇದು ನ್ಯಾಚುರಲ್ ಹೇರ್ ಡೈ.
2) ಮದರಂಗಿಯ ಎಲೆಗಳನ್ನು ಪೇಸ್ಟ್ ಮಾಡಿ ಬಾಯಿ ಹುಣ್ಣಿಗೆ ಹಚ್ಚುವುದರಿಂದ ಬಾಯಿ ಹುಣ್ಣು ಗುಣವಾಗುತ್ತದೆ.
3) ಇದರ ಎಲೆಯ ಕಷಾಯ ಮಾಡಿ ಹಾಲು ಹಾಕಿ ಸ್ವಲ್ಪ ಕೆಂಪು ಕಲ್ಲು ಸಕ್ಕರೆ ಸೇರಿಸಿ ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ದೇಹದಲ್ಲಿ ಬಲ ಉಂಟಾಗುತ್ತದೆ ಮತ್ತು ರಕ್ತ ಶುದ್ಧಿಯಾಗುತ್ತದೆ.
4) ಗೋರಂಟಿ ಸೊಪ್ಪು ಬೆಳ್ಳುಳ್ಳಿ ಮೆಣಸು ನಿಂಬೆರಸ ಸೇರಿಸಿ ಅರೆದು ಪೇಸ್ಟ್ ಮಾಡಿ ಹಚ್ಚುವುದರಿಂದ ಉಗುರು ಸುತ್ತು ನಿವಾರಣೆ ಆಗುತ್ತದೆ.
5) ಸೊಪ್ಪನ್ನು ನಿಂಬೆಹುಳಿಯಲ್ಲಿ ಅರೆದು ಅಂಗಲಿಗೆ ಹಚ್ಚುವುದರಿಂದ ಅಂಗಾಲು ಉರಿ ಗುಣವಾಗುತ್ತದೆ.
6) ಒಂದು ಭಾಗ ಸೊಪ್ಪು ರಸ ತೆಗೆದು ಮೂರು ಭಾಗ ಎಳ್ಳೆಣ್ಣೆ ಅಥವಾ ಕೊಬ್ಬರಿ ಎಣ್ಣೆ ಸೇರಿಸಿ ಕಾಯಿಸಿ ತಯಾರಿಸಿದ ಎಣ್ಣೆ ಹಚ್ಚುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಸೊಂಪಾಗಿ ಬೆಳೆಯುತ್ತದೆ.
7) ಗೋರಂಟಿಯ ಹೂ ಗೊಂಚಲನ್ನು ಕೂದಲಿಗೆ ಮುಡಿಯುವುದರಿಂದ ಅಥವಾ ತಲೆದಿಂಬಿನಲ್ಲಿಟ್ಟು ಮಲಗುವುದರಿಂದ ಚೆನ್ನಾಗಿ ನೆಮ್ಮದಿಯ ನಿದ್ದೆ ಬರುತ್ತದೆ.
8) ಗೋರಂಟಿಯ ಹೂವಿನೊಂದಿಗೆ ಪಚ್ಚ ಕರ್ಪೂರ ಸೇರಿಸಿ ಪರಿಮಳ ತೆಗೆದುಕೊಳ್ಳುವುದರಿಂದ ತಲೆನೋವು ಗುಣವಾಗುತ್ತದೆ.
9) ಗೋರಂಟಿಯ ಬೀಜದ ರಸ ತೆಗೆದು ಅಕ್ಕಿ ತೊಳೆದ ನೀರಿನಲ್ಲಿ ಸೇರಿಸಿ ಸೇವಿಸುವುದರಿಂದ ಕಾಮಾಲೆ ಗುಣವಾಗುತ್ತದೆ.
10) ಗೋರಂಟಿ ಬೀಜವನ್ನು ಕೆಂಡದಲ್ಲಿ ಹಾಕಿ ಘಾಟನ್ನು ಕಿವಿಯಲ್ಲಿ ತೆಗೆದುಕೊಳ್ಳುವುದರಿಂದ ಬಾಯಲ್ಲಿ ಹುಳುಗಳು ಬಿದ್ದು ಹಲ್ಲು ನೋವು ಗುಣವಾಗುತ್ತದೆ. ಇದುನ್ನು ಹಿರಿಯರು ಹಲ್ಲು ನೋವು ನಿವಾರಣೆಗಾಗಿ ಮಾಡುತ್ತಿದ್ದ ಔಷಧಿ.
11) ಸೊಪ್ಪನ್ನು ನಾಟಿ ಹಸುವಿನ ಹಾಲಿನಲ್ಲಿ ಸೇವಿಸುವುದರಿಂದ ಕಾಮಾಲೆ ಮತ್ತು ಕಾಮಾಲೆಯಿಂದ ಆದ ಸುಸ್ತು ಗುಣವಾಗುತ್ತದೆ.
12) ಗೋರಂಟಿ ಗಿಡದ ಚಕ್ಕೆಯನ್ನು ಕಷಾಯ ಮಾಡಿ ಕುಡಿಯುವುದರಿಂದ ಮೂತ್ರದ ಕಲ್ಲು ನಿವಾರಣೆ ಆಗುತ್ತದೆ.
13) ಕೂದಲಿನ ಎಣ್ಣೆಯಲ್ಲಿ ಗೋರಂಟಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ತಲೆಗೆ ಹಚ್ಚುವ ಸೋಪಿನಲ್ಲಿಯೂ ಗೋರಂಟಿಯನ್ನು ಬಳಸಲಾಗುತ್ತದೆ.
14)) ಉತ್ತರ ದಿಕ್ಕಿಗೆ ಹೋದ ಗೋರಂಟಿ ಬೇರನ್ನು ಅಮಾವಾಸ್ಯೆ ಯಂದು ಕಿತ್ತು ಪೂಜಿಸಿ ಕೊರಳಲ್ಲಿ ಕಟ್ಟುವುದರಿಂದ ಯಕೃತ್ತಿನ ಸಮಸ್ಯೆಗಳು ನಿವಾರಣೆ ಆಗುತ್ತದೆ. ಇದು ಮೂಢನಂಬಿಕೆಯಲ್ಲ. ಸ್ನಾನ ಮಾಡುವಾಗ ಎದೆಯ ಭಾಗದಿಂದ ನೀರು ಬಿದ್ದು ಈ ಕ್ರಿಯೆ ಇಂದ ಸರಿ ಹೋಗಿರುತ್ತದೆ .
15) ವರ್ಷಕ್ಕೆ ಒಮ್ಮೆ ನಾಗರ ಪಂಚಮಿಯಲ್ಲಿ ಸಾಂಪ್ರದಾಯಿಕವಾಗಿ ಉಗುರಿಗೆ ಉಪಯೋಗಿಸುತ್ತಾರೆ. ಇದರಿಂದ ಉಗುರಿನ ಅನೇಕ ಕಾಯಿಲೆಗಳು ಗುಣವಾಗುತ್ತದೆ. ಇದು ನಮ್ಮ ಹಿರಿಯರು ರಕ್ತ ಶುದ್ದಿಗೆ ಕಾಣಿಸಿಕೊಂಡ ಉಪಾಯ.

ಮಾಹಿತಿ – ಸುಮನಾ ಮಳಲಗದ್ದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

10 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

15 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago