30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

April 15, 2024
11:31 PM

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror