Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

Advertisement

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

18 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

19 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

19 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

20 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

20 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

20 hours ago