Advertisement
Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

5 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

6 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

16 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

20 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

20 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago