Advertisement
Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

Advertisement

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

5 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

5 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

5 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

6 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

15 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago