Advertisement
Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

6 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

7 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

8 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

11 hours ago