ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದಲ್ಲಿ ಗೊಣ್ಣೆ ಹುಳ್ಳುಗಳ ಕಾಟ ಶುರುವಾಗಿದ್ದು, ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೆಕ್ಕೆಜೋಳ, ಕಬ್ಬು, ಕೊತ್ತಂಬರಿ ಸೇರಿದಂತೆ ಎಲ್ಲ ಬೆಳೆಗಳು ಕೀಟ ಬಾಧೆಗೆ ತುತ್ತಾಗಿ ಹಾಳಾಗುತ್ತಿವೆ. ಕೀಟನಾಶಕ ಸಿಂಪಡಿಸಿದರೂ ಗೊಣ್ಣೆ ಹುಳುಗಳ ನಿಯಂತ್ರಣ ಕಂಡುಬರುತ್ತಿಲ್ಲ.
ಗೊಣ್ಣೆಹುಳ್ಳು ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ರೈತ ಮಂಜುನಾಥ ಪರಗೌಡ ಒತ್ತಾಯಿಸಿದರು. ಗೊಣ್ಣೆಹುಳು ಕಂಡುಬಂದ ಪ್ರದೇಶಗಳಲ್ಲಿ ವಿಜ್ಞಾನಿಗಳ ಜೊತೆಗೂಡಿ ಪರಿಶೀಲನೆ ನಡೆಸಲಾಗಿದ್ದು, ಅದರ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚೌಹಾಣ್ ಹೇಳಿದ್ದಾರೆ.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…