Advertisement
ಸುದ್ದಿಗಳು

ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಸ್ವಯಂಪ್ರೇರಿತ ದೂರು ದಾಖಲು

Share

 ಮೇ 13 ಮತ ಎಣಿಕೆ ದಿನದಂದು ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ  ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆ ಸಿಪಿಐ ದಯಾನಂದ ಶೇಗುಣಸಿ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರಡಿ ಪ್ರಕರಣ ದಾಖಲಾಗಿದ್ದು, “ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರು ಘೋಷಣೆ” ಕೂಗಿದ್ದಾರೆಂದು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

Advertisement
Advertisement
Advertisement
Advertisement

ಕಾಂಗ್ರೆಸ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕ್​ ಪರ ಘೋಷಣೆ

ಶನಿವಾರ (ಮೇ.13) ರಂದು ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ 2.30ರ ಸುಮಾರಿಗೆ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದ್ದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

Advertisement

 

ವೈರಲ್ ಆದ ವಿಡಿಯೋ ಫೇಕ್ ಎಂದಿದ್ದ ಕಾಂಗ್ರೆಸ್‌ ಶಾಸಕ ಆಸಿಫ್ ಸೇಠ್

ಈ ಬಗ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆಸಿಫ್ ಸೇಠ್ ನಿನ್ನೆ (ಮೇ.14) ರಂದು ಬೆಳಗಾವಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ “ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದ್ದರು.·

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago