ಮೇ 13 ಮತ ಎಣಿಕೆ ದಿನದಂದು ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆ ಸಿಪಿಐ ದಯಾನಂದ ಶೇಗುಣಸಿ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರಡಿ ಪ್ರಕರಣ ದಾಖಲಾಗಿದ್ದು, “ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರು ಘೋಷಣೆ” ಕೂಗಿದ್ದಾರೆಂದು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
ಶನಿವಾರ (ಮೇ.13) ರಂದು ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ 2.30ರ ಸುಮಾರಿಗೆ ಆಸೀಫ್ ಸೇಠ್ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದ್ದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಈ ಬಗ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ನಿನ್ನೆ (ಮೇ.14) ರಂದು ಬೆಳಗಾವಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ “ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದ್ದರು.·
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…