ಮೇ 13 ಮತ ಎಣಿಕೆ ದಿನದಂದು ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆ ಸಿಪಿಐ ದಯಾನಂದ ಶೇಗುಣಸಿ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರಡಿ ಪ್ರಕರಣ ದಾಖಲಾಗಿದ್ದು, “ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರು ಘೋಷಣೆ” ಕೂಗಿದ್ದಾರೆಂದು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
ಶನಿವಾರ (ಮೇ.13) ರಂದು ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ 2.30ರ ಸುಮಾರಿಗೆ ಆಸೀಫ್ ಸೇಠ್ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದ್ದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಈ ಬಗ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ನಿನ್ನೆ (ಮೇ.14) ರಂದು ಬೆಳಗಾವಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ “ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದ್ದರು.·
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…