Advertisement
ಸುದ್ದಿಗಳು

ಗ್ರಾ.ಪಂ. ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಆಗ್ರಹ | ಜನಸಂಖ್ಯೆಗೆ ಅನುಗುಣವಾಗಿ ಕ್ರಮ

Share

ರಾಜ್ಯದಲ್ಲಿ 50 ಗ್ರಾಮಪಂಚಾಯತ್‌ ಗಳು ಮತ್ತು  ಪಟ್ಟಣ ಪಂಚಾಯತ್ ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ವಿಧಾನಸಭೆಗಿಂದು ತಿಳಿಸಿದ್ದಾರೆ. ‌

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದಿನಕರ್ ಕೇಶವ ಶೆಟ್ಟಿ ಅವರ  ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅವರು, 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ  ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದು ನಿಜ. ಗೋಕರ್ಣದ ಬಗ್ಗೆ ನಮಗೂ ವಿಶೇಷವಾದ ಪ್ರೀತಿ ಇದೆ. ಆದರೆ ರಾಜ್ಯದಲ್ಲಿ ಗ್ರಾಮ ಪಂಚಾಯತ್‌ನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ರಾಜ್ಯಾದ್ಯಂತ ಒಂದೇ ಮಾನದಂಡವಿದೆ ಎಂದರು.

ಉತ್ತರ ಕನ್ನಡ  ಜಿಲ್ಲೆಯ ಗೋಕರ್ಣ ಗ್ರಾಮ ಪಂಚಾಯತ್‌ ಅನ್ನು  ಪಟ್ಟಣ ಪಂಚಾಯ್ತಿಯನ್ನಾಗಿ ಮೊದಲ ಆದ್ಯತೆಯಲ್ಲೇ ಮೇಲ್ದರ್ಜೆಗೇರಿಸಲು ಗಮನ ಕೊಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.

ಬಿಜೆಪಿ ಶಾಸಕ ಸುನೀಲ್‌ಕುಮಾರ್  ಮಾತನಾಡಿ, ಪ್ರವಾಸಿಗರು ಹೆಚ್ಚು ಆಗಮಿಸುವ ಪ್ರವಾಸಿ ತಾಣಗಳನ್ನು ಮೇಲ್ದರ್ಜೆಗೇರಿಸಲು ಮೊದಲ ಆದ್ಯತೆ ನೀಡಿ ಪರಿಗಣಿಸಿದರೆ ಸರ್ಕಾರಕ್ಕೂ ಗೌರವ ಬರುತ್ತದೆ ಎಂದರು.

ಬಿಜೆಪಿ ಶಾಸಕರಾದ ಪ್ರಭು ಚವ್ಹಾಣ್, ಭೈರತಿ ಬಸವರಾಜ್ ಮೊದಲಾದವರು ಧ್ವನಿಗೂಡಿಸಿ ಮಾತನಾಡಿದರು. ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ  144.75 ಕೋಟಿ ರೂ. ಮೊತ್ತದಲ್ಲಿ ಶೀತಲಗೃಹ ಮತ್ತು ಇನ್ನಿತರ ಮೂಲಸೌಕರ್ಯ ಕಾರ್ಯಗಳನ್ನು  ಕೈಗೊಳ್ಳಲು  ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ  ಎಸ್. ಪಾಟೀಲ್ ತಿಳಿಸಿದರು.

ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನ RIDF-30 ಯೋಜನೆಯಡಿ 254 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡುವಂತೆ ಕಳೆದ ಮೇ 18ರಂದು ಕೋರಲಾಗಿತ್ತು. ಆಗಸ್ಟ 8ರಂದು ಆರ್ಥಿಕ ಇಲಾಖೆ 144. 75 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿರುತ್ತದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಿದ್ದುಪಡಿ ತಂದ ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕೃಷಿ ಉತ್ಪನ್ನಗಳ ಆವಕ ಹೆಚ್ಚಾಗಿ ಬರುತ್ತಿವೆ. ರೈತರ ಬೆಳೆಗೆ ಯೋಗ್ಯ ದರ ಹಾಗೂ ಮಾರುಕಟ್ಟೆ  ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೀತಲ ಗೃಹಗಳನ್ನು ಸ್ಥಾಪಿಸಲು ಮತ್ತು ಹೆಚ್ಚು  ಮೂಲಸೌಲಭ್ಯ ಕಲ್ಪಿಸಲು ಸಚಿವರು ಹಾಗೂ  ಶಾಸಕರಿಂದ ಕೋರಿಕೆಗಳು ಸ್ವೀಕೃತವಾಗಿವೆ. ಈ ಹಿನ್ನಲೆಯಲ್ಲಿ 2024-25ನೇ ಸಾಲಿನ RIDF-30 ಯೋಜನೆಯಡಿ 374.75 ಕೋಟಿ ರೂ.ಗಳ ಹೆಚ್ಚುವರಿ  ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆಯನ್ನು ಕೋರಲಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

3 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

17 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

17 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

17 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago