Advertisement
MIRROR FOCUS

ಅಯೋಧ್ಯೆ ರಾಮಮಂದಿರಕ್ಕೆ ರಾಜ್ಯದಿಂದ ಘಂಟೆ, ಪೂಜಾ ಸಾಮಾಗ್ರಿ | ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ |

Share

ದೇಶದಾದ್ಯಂತ ಶಬರಿ ರಾಮನ ಬರುವಿಕೆಗಾಗಿ ಕಾಯುತ್ತಿದ್ದಂತೆ ದೇಶದ ಜನತೆ ರಾಮಮಮಂದಿರ ಉದ್ಘಾಟನೆಗೆ ಕಾಯುತ್ತಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ(Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆಗಳು ಆಯೋಜನೆಗೊಂಡಿದೆ. ಎಲ್ಲೆಲ್ಲೂ ಸಂಭ್ರಮ, ರಾಮ ಮಂದಿರಕ್ಕಾಗಿ ಕೊಡುಗೆಗಳು, ಸೇವೆಗಳು ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. ಅಲ್ಲದೆ ಕನ್ನಡದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ.

ಕರ್ನಾಟಕದಿಂದ ಸೇವೆ: ಅಯೋಧ್ಯೆಗೆ ರಾಜ್ಯದಿಂದ 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ರಿಷಬ್‌ ಶೆಟ್ಟಿ: ಅಯೋಧ್ಯಯ ರಾಮಮಂದಿರ  ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

On January 22, Ayodhya Ram Mandir will be dedicated to the people, and a program of Puja Punaskara has been planned in the villages. Everywhere there is celebration, offerings and services for Ram Mandir. As part of this, Banashankari of Bengaluru has dedicated the bell to the Rama Mandir of Ayodhya in the first phase. Also, it is a very happy thing that famous Kannada actor and director Rishabh Shetty has been invited to the inauguration of Ram Mandir.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

4 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

15 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

16 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

19 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago