Advertisement
MIRROR FOCUS

ಅಯೋಧ್ಯೆ ರಾಮಮಂದಿರಕ್ಕೆ ರಾಜ್ಯದಿಂದ ಘಂಟೆ, ಪೂಜಾ ಸಾಮಾಗ್ರಿ | ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ |

Share

ದೇಶದಾದ್ಯಂತ ಶಬರಿ ರಾಮನ ಬರುವಿಕೆಗಾಗಿ ಕಾಯುತ್ತಿದ್ದಂತೆ ದೇಶದ ಜನತೆ ರಾಮಮಮಂದಿರ ಉದ್ಘಾಟನೆಗೆ ಕಾಯುತ್ತಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ(Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆಗಳು ಆಯೋಜನೆಗೊಂಡಿದೆ. ಎಲ್ಲೆಲ್ಲೂ ಸಂಭ್ರಮ, ರಾಮ ಮಂದಿರಕ್ಕಾಗಿ ಕೊಡುಗೆಗಳು, ಸೇವೆಗಳು ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. ಅಲ್ಲದೆ ಕನ್ನಡದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ.

ಕರ್ನಾಟಕದಿಂದ ಸೇವೆ: ಅಯೋಧ್ಯೆಗೆ ರಾಜ್ಯದಿಂದ 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ರಿಷಬ್‌ ಶೆಟ್ಟಿ: ಅಯೋಧ್ಯಯ ರಾಮಮಂದಿರ  ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

On January 22, Ayodhya Ram Mandir will be dedicated to the people, and a program of Puja Punaskara has been planned in the villages. Everywhere there is celebration, offerings and services for Ram Mandir. As part of this, Banashankari of Bengaluru has dedicated the bell to the Rama Mandir of Ayodhya in the first phase. Also, it is a very happy thing that famous Kannada actor and director Rishabh Shetty has been invited to the inauguration of Ram Mandir.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

6 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

7 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

15 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

17 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

22 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

23 hours ago