Bellare | ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಆರೋಪ | ಹಿಂದೂ ಸಂಘಟನೆಗಳಿಂದ ಖಂಡನೆ | ಪೊಲೀಸರಿಂದ ಕ್ರಮದ ಭರವಸೆ |

September 10, 2022
9:34 PM

ಮತ್ತೆ ಉದ್ವಿಗ್ನಗೊಂಡ ಸುಳ್ಯ ತಾಲೂಕಿನ ಬೆಳ್ಳಾರೆ ಸದ್ಯ ತಿಳಿಯಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ಎಂಬವರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಹೀಗಾಗಿ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡುವುದರ ಜೊತೆಗೆ ಯುವಕರು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ್ದರು. ಇದೀಗ ಪೊಲೀಸರು ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿದೆ.

Advertisement
Advertisement

ಪ್ರವೀಣ್ ನೆಟ್ಟಾರ್(Praveen Nettar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರ ಸಫ್ರಿದ್  ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ರೈ  ಅವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಬೆದರಿಕೆ ಒಡ್ಡಿದ ಸಫ್ರೀದ್‌ ಎಂಬವರನ್ನು ಕೂಡಲೇ ವಿಚಾರಿಸಿ ಕ್ರಮ ಕೈಗೊಳಳುವ ಭರವಸೆ ನೀಡಿದ ಮೇರೆಗೆ ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ತೆರಳಿದರು. ‌

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ತಕ್ಷಣವೇ ಈ ಬಗ್ಗೆ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ. 

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |
June 3, 2025
9:07 PM
by: ಸಾಯಿಶೇಖರ್ ಕರಿಕಳ
ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!
June 3, 2025
8:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group