Bellare | ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಆರೋಪ | ಹಿಂದೂ ಸಂಘಟನೆಗಳಿಂದ ಖಂಡನೆ | ಪೊಲೀಸರಿಂದ ಕ್ರಮದ ಭರವಸೆ |

September 10, 2022
9:34 PM

ಮತ್ತೆ ಉದ್ವಿಗ್ನಗೊಂಡ ಸುಳ್ಯ ತಾಲೂಕಿನ ಬೆಳ್ಳಾರೆ ಸದ್ಯ ತಿಳಿಯಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ಎಂಬವರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಹೀಗಾಗಿ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡುವುದರ ಜೊತೆಗೆ ಯುವಕರು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ್ದರು. ಇದೀಗ ಪೊಲೀಸರು ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿದೆ.

ಪ್ರವೀಣ್ ನೆಟ್ಟಾರ್(Praveen Nettar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರ ಸಫ್ರಿದ್  ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ರೈ  ಅವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಬೆದರಿಕೆ ಒಡ್ಡಿದ ಸಫ್ರೀದ್‌ ಎಂಬವರನ್ನು ಕೂಡಲೇ ವಿಚಾರಿಸಿ ಕ್ರಮ ಕೈಗೊಳಳುವ ಭರವಸೆ ನೀಡಿದ ಮೇರೆಗೆ ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ತೆರಳಿದರು. ‌

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ತಕ್ಷಣವೇ ಈ ಬಗ್ಗೆ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ. 

 

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
January 12, 2026
7:50 PM
by: ರೂರಲ್‌ ಮಿರರ್ ಸುದ್ದಿಜಾಲ
ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?
January 12, 2026
7:39 PM
by: ರೂರಲ್‌ ಮಿರರ್ ಸುದ್ದಿಜಾಲ
ನಿಮ್ಮ ಬಳಿ 15 ವರ್ಷ ಹಳೆಯ ವಾಹನಗಳಿವೆಯೇ…? ಹಾಗಾದರೆ ಈ ಹೊಸ ರೂಲ್ಸ್ ಬಗ್ಗೆ ತಿಳಿಯಲೇಬೇಕು..!
January 12, 2026
7:37 PM
by: ರೂರಲ್‌ ಮಿರರ್ ಸುದ್ದಿಜಾಲ
ನಗರದ ಉದ್ಯೋಗ ತ್ಯಜಿಸಿ ಹಳ್ಳಿಯಲ್ಲಿ ಉದ್ಯಮ | ಎತ್ತಿನ ಗಾಣದ ಎಣ್ಣೆಯಿಂದ ಯಶಸ್ಸು
January 12, 2026
7:36 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror