Advertisement
ಸುದ್ದಿಗಳು

Bellare | ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಆರೋಪ | ಹಿಂದೂ ಸಂಘಟನೆಗಳಿಂದ ಖಂಡನೆ | ಪೊಲೀಸರಿಂದ ಕ್ರಮದ ಭರವಸೆ |

Share

ಮತ್ತೆ ಉದ್ವಿಗ್ನಗೊಂಡ ಸುಳ್ಯ ತಾಲೂಕಿನ ಬೆಳ್ಳಾರೆ ಸದ್ಯ ತಿಳಿಯಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ಎಂಬವರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಹೀಗಾಗಿ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡುವುದರ ಜೊತೆಗೆ ಯುವಕರು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ್ದರು. ಇದೀಗ ಪೊಲೀಸರು ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿದೆ.

ಪ್ರವೀಣ್ ನೆಟ್ಟಾರ್(Praveen Nettar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರ ಸಫ್ರಿದ್  ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ರೈ  ಅವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಬೆದರಿಕೆ ಒಡ್ಡಿದ ಸಫ್ರೀದ್‌ ಎಂಬವರನ್ನು ಕೂಡಲೇ ವಿಚಾರಿಸಿ ಕ್ರಮ ಕೈಗೊಳಳುವ ಭರವಸೆ ನೀಡಿದ ಮೇರೆಗೆ ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ತೆರಳಿದರು. ‌

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ತಕ್ಷಣವೇ ಈ ಬಗ್ಗೆ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ. 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

10 minutes ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

15 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

18 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

23 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago