Advertisement
ಸುದ್ದಿಗಳು

Bellare | ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಆರೋಪ | ಹಿಂದೂ ಸಂಘಟನೆಗಳಿಂದ ಖಂಡನೆ | ಪೊಲೀಸರಿಂದ ಕ್ರಮದ ಭರವಸೆ |

Share

ಮತ್ತೆ ಉದ್ವಿಗ್ನಗೊಂಡ ಸುಳ್ಯ ತಾಲೂಕಿನ ಬೆಳ್ಳಾರೆ ಸದ್ಯ ತಿಳಿಯಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ಎಂಬವರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಹೀಗಾಗಿ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡುವುದರ ಜೊತೆಗೆ ಯುವಕರು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ್ದರು. ಇದೀಗ ಪೊಲೀಸರು ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿದೆ.

ಪ್ರವೀಣ್ ನೆಟ್ಟಾರ್(Praveen Nettar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರ ಸಫ್ರಿದ್  ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ರೈ  ಅವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಬೆದರಿಕೆ ಒಡ್ಡಿದ ಸಫ್ರೀದ್‌ ಎಂಬವರನ್ನು ಕೂಡಲೇ ವಿಚಾರಿಸಿ ಕ್ರಮ ಕೈಗೊಳಳುವ ಭರವಸೆ ನೀಡಿದ ಮೇರೆಗೆ ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ತೆರಳಿದರು. ‌

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ತಕ್ಷಣವೇ ಈ ಬಗ್ಗೆ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 hour ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

9 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago